ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಕಳ್ಳತನದ ಆರೋಪಿ ಹಸನಸಾಬ್‌ ಕಾಶೀಮಸಾಬ್‌ ಬೇಗ್‌ ಎಂಬ ವ್ಯಕ್ತಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಬರೋಬ್ಬರಿ 7 ವರ್ಷಗಳ ಹಿಂದೆ ಧಾರವಾಡದ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಮಂಗಳವಾರ ಪೇಟೆಯ ಉಮೇಶ ಮಹೇಂದ್ರಕರ್ ಎಂಬುವವರ ಮನೆಯಲ್ಲಿ ಚಿನ್ನಾಭರಣ, ಬೆಲೆಬಾಳುವ ಸಾಮಾಗ್ರಿ ಹಾಗೂ ಸಂಗಮ್ ಸರ್ಕಲ್ ಹತ್ತಿರದ ಕ್ಷೇತ್ರಿಯ ಮೊಬೈಲ್ ಅಂಗಡಿಯಲ್ಲಿ ಮೊಬೈಲ್‌, ನಗದು ಕಳ್ಳತನ ಮಾಡಿದ್ದ. ಪೊಲೀಸರು ಈ ವ್ಯಕ್ತಿಯನ್ನು ಬಂಧಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 2ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶ ಆಚಪ್ಪ ದೊಡ್ಡ ಬಸವರಾಜ ಅವರು, ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ, ಪ್ರಕರಣದ ದೂರುದಾರರಿಗೆ ರೂ. 2 ಸಾವಿರ ಪರಿಹಾರ ನೀಡಬೇಕೆಂದು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಗೀತಾ ಹೊಸಗಾಣಿಗೇರ ವಾದಿಸಿದ್ದರು. 

Leave a Reply

Your email address will not be published. Required fields are marked *

You May Also Like

ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ ಆಯ್ಕೆ

ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ,…

ಆರೋಗ್ಯ ಇಲಾಖೆಗೆ ನೇಮಕಗೊಂಡ ವೈದ್ಯರನ್ನು ಸ್ವಾಗತ ಕೋರಿದ ಸಚಿವ ಸುಧಾಕರ್

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ.

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.