7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಕಳ್ಳತನದ ಆರೋಪಿ ಹಸನಸಾಬ್‌ ಕಾಶೀಮಸಾಬ್‌ ಬೇಗ್‌ ಎಂಬ ವ್ಯಕ್ತಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಬರೋಬ್ಬರಿ 7 ವರ್ಷಗಳ ಹಿಂದೆ ಧಾರವಾಡದ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಮಂಗಳವಾರ ಪೇಟೆಯ ಉಮೇಶ ಮಹೇಂದ್ರಕರ್ ಎಂಬುವವರ ಮನೆಯಲ್ಲಿ ಚಿನ್ನಾಭರಣ, ಬೆಲೆಬಾಳುವ ಸಾಮಾಗ್ರಿ ಹಾಗೂ ಸಂಗಮ್ ಸರ್ಕಲ್ ಹತ್ತಿರದ ಕ್ಷೇತ್ರಿಯ ಮೊಬೈಲ್ ಅಂಗಡಿಯಲ್ಲಿ ಮೊಬೈಲ್‌, ನಗದು ಕಳ್ಳತನ ಮಾಡಿದ್ದ. ಪೊಲೀಸರು ಈ ವ್ಯಕ್ತಿಯನ್ನು ಬಂಧಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 2ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶ ಆಚಪ್ಪ ದೊಡ್ಡ ಬಸವರಾಜ ಅವರು, ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ, ಪ್ರಕರಣದ ದೂರುದಾರರಿಗೆ ರೂ. 2 ಸಾವಿರ ಪರಿಹಾರ ನೀಡಬೇಕೆಂದು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಗೀತಾ ಹೊಸಗಾಣಿಗೇರ ವಾದಿಸಿದ್ದರು. 

Exit mobile version