ಕಠ್ಮಂಡು: ಉತ್ತರಾಖಂಡ ಹಿಮ ಸ್ಫೋಟದಲ್ಲಿ ತಪೋವನ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ೩೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು ಇದರ ಬೆನ್ನಲ್ಲೇ ಭೂತಾನ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ.

ವಾಂಗ್ಚು ಸೇತುವೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೂತನ್ ರಾಜಧಾನಿ ತಿಮ್ಫುವಿನ ನೈಋತ್ಯ ಭಾಗದಿಂದ ಸುಮಾರು ೬೦ ಕಿ.ಮೀ ದೂರದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿತ್ತು. ಸೇತುವೆ ಸಂಪೂರ್ಣ ನಿರ್ಮಾಣವಾಗಿತ್ತು. ಅಂತಿಮ ಹಂತದ ಕೆಲಸ ಮಾಡುವ ಸಲುವಾಗಿ ೯ ಮಂದಿ ಕಾರ್ಮಿಕರು ಸೇತುವೆ ಮೇಲೆ ನಿಂತಿದ್ದಾಗ ಸೇತುವೆ ಕುಸಿದುಬಿದ್ದಿದೆ.

ಭೂತಾನ್ ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿರುವ ಹಾ ಜಿಲ್ಲೆಯನ್ನು ಪಾರೊದೊಂದಿಗೆ ಸಂಪರ್ಕಿಸಲು ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರಿಗೆ ಭೂತಾನ್ ಪ್ರಧಾನಿ ಲೋಟೋ ತ್ಸೆರಿಂಗ್ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

30ಕೆ.ಜಿ ಗೋಲ್ಡ್ ಹಿಂದಿನ ಈ ‘ಸ್ವಪ್ನ’ಸುಂದರಿ ಯಾರು?

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ದೇಶಕ್ಕೆ ಸಾಗಿಸಲ್ಪಟ್ಟ 30 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು…

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…

ಕೊರೊನಾ ಪರೀಕ್ಷೆ: ದೇಶಾದ್ಯಂತ ಸಮಂಜಸ ದರ ನಿಗದಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.…