ಕಾಲುವೆಗೆ ಜಾರಿದ ಕಾರು – ನಾಲ್ವರ ಸಾವು!

ಜೈಪುರ : ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಆನದ ಹನುಮಾನ್ ನಗರ ಜಿಲ್ಲೆಯಲ್ಲಿ ನಡೆದಿದೆ. 

ಈ ಕಾರಿನಲ್ಲಿ ದಂಪತಿ ಸೇರಿದಂತೆ ಅವರ ಮಗಳು ಹಾಗೂ ಸಂಬಂಧಿಕರು ಸಿಕಾರ್ ನಿಂದ ರಾವತ್ಸರ್ ಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ವಿನೋದ್ ಕುಮಾರ್(45), ಪತ್ನಿ ರೇಣು(42) ಹಾಗೂ 15 ವರ್ಷದ ಮಗಳು ಮತ್ತು ಅವರ ಸಂಬಂಧಿಕರಾದ ಸುನೀತ ಭತಿ(40) ಎಂದು ಗುರುತಿಸಲಾಗಿದೆ. 

ಕುಟುಂಬದ ಸ್ನೇಹಿತ ರಮೇಶ್ ಕುಮಾರ್ ಎಂಬುವವರು ಕಾರು ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ರಸ್ತೆ ಮಧ್ಯೆ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾರೆ. ಆದರೆ, ಹ್ಯಾಂಡ್ ಬ್ರೇಕ್ ಹಾಕುವುದನ್ನು ಮರೆತು ಹೋಗಿದ್ದಾರೆ. ಹೀಗಾಗಿ ಕಾರು ಉರುಳಿ ಇಂದಿರಾಗಾಂಧಿ ಕಾಲುವೆಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Exit mobile version