ಜೈಪುರ : ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಆನದ ಹನುಮಾನ್ ನಗರ ಜಿಲ್ಲೆಯಲ್ಲಿ ನಡೆದಿದೆ. 

ಈ ಕಾರಿನಲ್ಲಿ ದಂಪತಿ ಸೇರಿದಂತೆ ಅವರ ಮಗಳು ಹಾಗೂ ಸಂಬಂಧಿಕರು ಸಿಕಾರ್ ನಿಂದ ರಾವತ್ಸರ್ ಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ವಿನೋದ್ ಕುಮಾರ್(45), ಪತ್ನಿ ರೇಣು(42) ಹಾಗೂ 15 ವರ್ಷದ ಮಗಳು ಮತ್ತು ಅವರ ಸಂಬಂಧಿಕರಾದ ಸುನೀತ ಭತಿ(40) ಎಂದು ಗುರುತಿಸಲಾಗಿದೆ. 

ಕುಟುಂಬದ ಸ್ನೇಹಿತ ರಮೇಶ್ ಕುಮಾರ್ ಎಂಬುವವರು ಕಾರು ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ರಸ್ತೆ ಮಧ್ಯೆ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾರೆ. ಆದರೆ, ಹ್ಯಾಂಡ್ ಬ್ರೇಕ್ ಹಾಕುವುದನ್ನು ಮರೆತು ಹೋಗಿದ್ದಾರೆ. ಹೀಗಾಗಿ ಕಾರು ಉರುಳಿ ಇಂದಿರಾಗಾಂಧಿ ಕಾಲುವೆಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ

ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ – ಸರ್ಕಾರ!

ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ…