ಹೊಸದುರ್ಗ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಹಕ್ಕೊತ್ತಾಯಕ್ಕಾಗಿ ಪಟ್ಟಣದಲ್ಲಿ ಬುಧವಾರ ನಡೆದ ಬೃಹತ್ ಹೋರಾಟದ ಮೆರವಣಿಗೆಯಲ್ಲಿ ತಾಲ್ಲೂಕಿನ ಮುಸ್ಲಿಂ, ಜೈನ, ಕ್ರಿಶ್ಚಿಯನ್, ವೀರಶೈವ ಲಿಂಗಾಯತ, ಕುರುಬ, ನಾಯಕ ಸೇರಿ ಎಲ್ಲಾ ಧರ್ಮ, ಜಾತಿಯ ಮುಖಂಡರು ಭಾಗವಹಿಸಿ ದೇವಾಂಗ ಸಮಾಜಕ್ಕೆ ಬೆಂಬಲ ವ್ಯಕ್ತಪಡಿಸಿದರು.

ದೇವಮಾನವ ಕುಲದ ಘನತೆ, ಗೌರವ ಹೆಚ್ಚಿಸಲು ಬಟ್ಟೆ ನೇಯ್ದು ಕೊಟ್ಟಿರುವ ದೇವಾಂಗ ಜನರು ಶಾಂತಿ ಪ್ರಿಯರು, ಸೌಮ್ಯವಾದಿಗಳು. ಅವರು ಉಳಿದೆಲ್ಲಾ ಧರ್ಮ, ಜಾತಿಯವರ ಜೊತೆಗೆ ಸ್ನೇಹದಿಂದ ಬದುಕುತ್ತಿದ್ದು, ಮಾದರಿಯಾಗಿದ್ದಾರೆ. ಆದರೆ, ಅತ್ಯಂತ ಹಿಂದುಳಿದಿರುವ ಇಂತಹ ಸಮುದಾಯ ಮುಖ್ಯವಾಹಿನಿಗೆ ಬರಬೇಕಾದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯದಡಿ ಈ ಸಮುದಾಯಕ್ಕೆ ಶೀಘ್ರ ಶೇ 2 ರಷ್ಟು ವಿಶೇಷ ಮೀಸಲಾತಿ ಕೊಡಬೇಕು.

ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒಕ್ಕೊರಲಿನಿಂದ ಸರ್ಕಾರಕ್ಕೆ ಮನವಿ ಮಾಡಿದರು. ಹುಳಿಯಾರು ರಸ್ತೆಯಲ್ಲಿರುವ ಬನಶಂಕರಿ ಸಮುದಾಯ ಭವನದಿಂದ ಹೊರಟದ ಮೆರವಣಿಗೆಗೆ ಹಂಪಿ ಹೇಮಕೂಟ ಗಾಯಿತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಚಾಲನೆ ನೀಡಿ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದರು.

      ಹೊಸದುರ್ಗದಲ್ಲಿ ನಾವು ಸಾಂಕೇತಿಕವಾಗಿ ಮಾಡಿದ ಹೋರಾಟಕ್ಕೆ ನಮ್ಮ ನಿರೀಕ್ಷೆಗೂ ಮೀರಿ ಜನಸ್ತೋಮ ಸೇರಿದೆ. ಹಾಗೆಯೇ ತಾಲ್ಲೂಕಿನ ಮಾಜಿ ಶಾಸಕರು, ಎಲ್ಲ ಸಮುದಾಯದ ಮುಖಂಡರು ಸುಡುಬಿಸಿಲನ್ನು ಲೆಕ್ಕಿಸದೇ ಬಂದು ನಮ್ಮ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ತಂದಿದೆ. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ನಾವು ಯಾವುದೇ ಸೌಲಭ್ಯ ಪಡೆಯಲು ಹೋರಾಟ ಮಾಡಿರಲಿಲ್ಲ. ಈಗ ಸರ್ಕಾರ ಹೋರಾಟ ಮಾಡುವಂತೆ ಮಾಡಿದೆ. ಹಾಗಾಗಿ ನಮ್ಮ ಎರಡು ಬೇಡಿಕೆಯನ್ನು ಸರ್ಕಾರ ಈಡೇರಿಸುವ ವರೆಗೂ ಹೋರಾಟ ನಿಲ್ಲದು ಎಂದು ಎಚ್ಚರಿಕೆ ನೀಡಿದರು.

ನಂತರ ದಯಾನಂದಪುರಿ ಸ್ವಾಮೀಜಿ ಹಾಗೂ ಸಮಾಜದ ಮುಖಂಡರು ತಹಶೀಲ್ದಾರ್ ವೈ. ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಮಹಾರಾಷ್ಟ್ರ ಮಾದರಿಯಲ್ಲಿ ಶೇ ೨ರಷ್ಟು ವಿಶೇಷ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಇಲ್ಕಲ್ ವಿಜಯಕುಮಾರ್ ಸಮಾಜದ ಬೇಡಿಕೆಗೆ ಸಾಥ್ ನೀಡಿದರು.

ಸಮುದಾಯದ ಅಭಿವೃದ್ಧಿಗೆ ಸರ್ಕಾರಕ್ಕೆ ಒತ್ತಾಯಿಸಿರುವ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಬೇಡಿಕೆ ಈಡೇರುವವರೆಗೂ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೊಸದುರ್ಗ ದೇವಾಂಗ ಸಮಾಜದ ಅಧ್ಯಕ್ಷ ಡಿ.ಆರ್. ಗೋವಿಂದರಾಜು ಎಚ್ಚರಿಕೆ ನೀಡಿದರು.

ನಾವು ಎಲ್ಲರಂತೆ ಈ ರಾಜ್ಯದ ಪ್ರಜೆಗಳಾಗಿದ್ದು, ಇತರೆ ಸಮಾಜದವರಂತೆ ಸಾಮಾಜಿಕ ನ್ಯಾಯದಡಿ ನಮಗೂ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಂದು ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಹೋರಾಟ ಸಮಿತಿ ರಾಜ್ಯ ಸಂಚಾಲಕ ಡಾ.ಜಿ. ರಮೇಶ್ ಆಗ್ರಹಿಸಿದರು.

Leave a Reply

Your email address will not be published. Required fields are marked *

You May Also Like

ಸೂರ್ಯಕಾಂತಿಗೆ ಕೋರಿ ಹುಳಗಳ ದಾಳಿ-ರೈತರು ಕಂಗಾಲು

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೊಂಡಿರುವ ಸೂರ್ಯಕಾಂತಿ ಬೆಳೆ ಹುಲುಸಾಗಿ ಬೆಳೆದು ನಿಂತಿದೆ. ಹಚ್ಚು ಹಸಿರಾಗಿ…

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.