ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್


ಬೆಂಗಳೂರು:
ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೇಳೆ ಮುಂಚೂಣಿಯಲ್ಲಿ ನಿಂತು ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಗೌರವ ಧನ ಹೆಚ್ಚಿಸುವ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.
ಇನ್ನು ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರು, ಹಸುಗೂಸುಗಳ ಮರಣ ತಪ್ಪಿಸಲು ಪೌಷ್ಠಿಕಾಂಶಯುಕ್ತ ಅಹಾರ ಒದಗಿಸಲು ಹೊಸ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಸ್ವಸಹಾಯ ಗುಂಪುಗಳಿಗೆ ಅನುಕೂಲವಾಗುವಂತ ಕಾರ್ಯಕ್ರಮ ರೂಪಿಸಲು ಮನವಿ ಮಾಡಲಾಗಿದೆ ಎಂದರು.

Exit mobile version