ದೆಹಲಿ:  ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ  ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.

ಕೇಂದ್ರ ಸರ್ಕಾರ ನೌಕರರು, ಪೀಂಚಣಿದಾರರು ತುರ್ತು ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರು ಎಂಬ ಕಾರಣಕ್ಕೆ ಸರ್ಕಾರ ಆರೋಗ್ಯ ವಿಮಾ ಸೌಲಭ್ಯವನ್ನು ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಆರೋಗ್ಯ ವಿಮಾ ಸೌಲಭ್ಯ ಪಡೆಯುವುದು ಸರ್ಕಾರಿ ನೌಕರನ ಹಕ್ಕು. ಈ ಹಕ್ಕನ್ನು ಸರ್ಕಾರ ಕಸಿಯುವಂತಿಲ್ಲ. ನೌಕರ ದಾಖಲೆ ನೀಡಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವ ಕುರಿತು ಪರಿಶೀಲನೆ ನಡೆಸಿ ಚಿಕಿತ್ಸಾ ವೆಚ್ಚವನ್ನು ನೀಡಬಹುದು ಎಂದು ಸುಪ್ರೀಂ ತಿಳಿಸಿದೆ.

ಸುಪ್ರೀಂ ಕೋರ್ಟ್‌ ಈ ತೀರ್ಪಿನಿಂದ ಸರ್ಕಾರಿ ನೌಕರರು ನಿಟ್ಟುಸಿರುಬಿಡುವಂತಾಗಿದೆ. ಈ ಮೊದಲು ಯಾವುದೇ ಖಾಯಿಲೆ ಇರಲಿ ಸರ್ಕಾರದಿಂದ ಚಿಕಿತ್ಸಾವೆಚ್ಚವನ್ನು ಪಡೆಯಬೇಕೆಂದಿದ್ದರೆ ಸಿಜಿಹೆಚ್‌ಎಸ್‌ ಸೂಚಿಸಿದ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ಪಡೆಯಬೇಕಿತ್ತು. ಕೆಲವೊಮ್ಮೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಬಂದರೆ ಆರೋಗ್ಯ ವಿಮಾ ಸೌಲಭ್ಯವಿದ್ದರೂ ಆ ಚಿಕಿತ್ಸಾ ಮೊತ್ತ ಸರ್ಕಾರಿ  ನೌಕರನಿಗೆ ಹೊರೆಯಾಗುತ್ತಿತ್ತು. ಆದರೆ ಸುಪ್ರೀಂ ಕೋರ್ಟ್‌ ನ ಈ ತೀರ್ಪು ಈಗ ಸರ್ಕಾರಿ ನೌಕರರಿಗೆ ಆರೋಗ್ಯ ವಿಮಾ ಸೌಲಭ್ಯವನ್ನು ಸಂಪೂರ್ಣ ರೀತಿಯಲ್ಲಿ ಪಡೆಯಲು ನೆರವಾಗಲಿದೆ.

Leave a Reply

Your email address will not be published. Required fields are marked *

You May Also Like

ಇನ್ನು ಮುಂದೆ ವಾಟ್ಸಪ್ ಮೂಲಕವೂ ಹಣ ವರ್ಗಾಯಿಸಬಹುದು!

ನವದೆಹಲಿ : ದೇಶದಲ್ಲಿನ ವಾಟ್ಸಪ್ ಬಳಕೆದಾರರಿಗೆ ಆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ವಾಟ್ಸಪ್ ಬಳಕೆದಾರರು ಇದರ ಮೂಲಕ ಹಣ ವರ್ಗಾಯಿಸಬಹುದಾಗಿದೆ. ಇದಕ್ಕೆ ಈಗಾಗಲೇ ರಾಷ್ಟ್ರೀಯ ಪಾವತಿ ನಿಗಮ(ಎನ್ ಪಿಸಿಐ) ಅನುಮೋದನೆ ನೀಡಿದೆ.

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

ದೆಹಲಿ: ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸ್ಘಾಡ್ಸೇರಿದಂತೆ 13 ಜಿಲ್ಲೆಗಳಲ್ಲಿ ನೆಲೆನಿಂತ ಹಿಂದೂ, ಸಿಖ್, ಜೈನ, ಬೌದ್ಧ ಹಾಗು ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಭಾರತ ಸರ್ಕಾರ ಅರ್ಜಿ ಆಹ್ವಾನಿಸಿದೆ.

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ವಿಶಾಖಪಟ್ಟಣ ಘಟನೆ: ಮೃತ ಕುಟುಂಬಕ್ಕೆ ಕೋಟಿ ರೂ, ಪರಿಹಾರ ಘೋಷಣೆ

ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.