ಹನುಮನ ದೇವಸ್ಥಾನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ನೆಲಮಂಗಲ : ತಾಲೂಕಿನ ವಿಶ್ವೇಶ್ವರಪುರ ಹತ್ತಿರದ ಆಂಜನೇಯ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದಕ್ಕೆ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ದೇವಸ್ಥಾನವು ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಾಸ್ ಟೋಲ್ ಹತ್ತಿರದ ಸರ್ಕಲ್ ಬಳಿ ಇದೆ. ಬೆಂಕಿ ಹಚ್ಚಿದ ಕಿಡಿಗೇಡಿಗಳು ವಿಗ್ರಹವನ್ನು ಜಖಂ ಕೂಡ ಮಾಡಿದ್ದಾರೆ. ಪರಿಣಾಮವಾಗಿ ದೇವರ ವಿಗ್ರಹ ಹಾಗೂ ದೇವಾಲಯ ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. 

ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಹಲವು ಸಂಘಟನೆಯ ಮುಖಂಡರು, ಪ್ರತಿಭಟನೆ ನಡೆಸಿ ಈ ಕೃತ್ಯಕ್ಕೆ ಕಾರಣರಾದವರನ್ನು ಕೂಡಲೇ ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ. 

Exit mobile version