ನವದೆಹಲಿ: ಲಡಾಖ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಸಮಸ್ಯೆ ಸೃಷ್ಟಿಯಾದ ಬಳಿಕ ಸೇನೆ ನಿಯೋಜಿಸಲಾಗಿದ್ದು, ಇದೀಗ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳದ ಹೊರತು ಭಾರತ ಸೇನಾಪಡೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವುದಿಲ್ಲ ಎಂದು ಸೇನೆ ತಿಳಿಸಿದೆ.

ಸುಮಾರು 10 ತಿಂಗಳಿನಿಂದಲೂ ಪ್ಯಾಂಗಾಂಗ್ ತೀರದಲ್ಲಿ ಭಾರತ ಮತ್ತು ಚೀನಾದ ಎರಡು ಸೇನೆಗಳು ವಾಸ್ತವ್ಯ ಹೂಡಿದ್ದು, ಏನೇ ಸಮಸ್ಯೆಗಳಿದ್ದರೂ ಕೂಡ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗುವುದು ಎಂದು ತೀರ್ಮಾನಿಸಿದ್ದರೂ ಸಹ ಎರಡೂ ರಾಷ್ಟ್ರಗಳ ಪೂರ್ತಿಯಾಗಿ ಸೇನೆ ವಾಪಸ್ ಆಗಿಲ್ಲ.

 ಈ ಹಿನ್ನೆಲೆ ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡ ನಂತರವಷ್ಟೇ ಭಾರತ ತನ್ನ ಸೇನಾಪಡೆಯನ್ನು ಹಿಂಪಡೆಯಲಿದೆ ಎಂದು ತಿಳಿಸಿದೆ.ಆದರೆ ಸೇನೆ ಹಿಂದಕ್ಕೆ ಕರೆಸಿಕೊಳ್ಳಲು ಮತ್ತಷ್ಟು ಸಮಯ ಬೇಕಾಗಬಹುದು. ಹೀಗಾಗಿ ಗಡಿಯಲ್ಲಿ ಸೇನೆ ಸನ್ನದ್ಧ ಸ್ಥಿತಿಯಲ್ಲೇ ಇರಲಿದೆ ಎಂದು ನವದೆಹಲಿ ಮತ್ತು ಬೀಜಿಂಗ್ ನಡುವೆ ಮಾತುಕತೆಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕರಿನಾ-ಸೈಫ್ ಅಲಿ ಖಾನ್ ದಂಪತಿಗೆ ಮತ್ತೊಂದು ಮಗು

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ದಂಪತಿಗೆ ಮತ್ತೊಂದು ಮಗು ಜನಿಸಿದ್ದು ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.

ನೌಕರರಿಗೆ ಶಾಕಿಂಗ್ ನ್ಯೂಸ್: ದಕ್ಷತೆ ಆಧರಿಸಿ ವೇತನ ಕಡಿತ

ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ.

ಗಾಂಧೀಜಿ ಪ್ರತಿಮೆ ದ್ವಂಸಗೊಳಿಸಿದ ಕಿಡಿಗೇಡಿಗಳು

ದೇಶದಲ್ಲಿ ಜ.30 ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹುತಾತ್ಮರಾದ ದಿನ ಆಚರಿಸಲಾಗುತ್ತಿದ್ದು, ಅಮೇರಿಕದಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ದ್ವಂಸಗೊಳಸಿದ್ದಾರೆ.

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…