ನವದೆಹಲಿ:
ಸೀತೆಯ ನೇಪಾಳ ಹಾಗೂ ರಾವಣನ ಲಂಕಾದಲ್ಲಿ ಪೆಟ್ರೋಲ್ ದರ ಏಕೆ ಅಗ್ಗವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ವಿಶ್ವಂಭರ ಪ್ರಸಾದ್ ನಿಶಾದ್ ಬುಧವಾರ ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದರು.
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಶ್ನಿಸಿದ ವಿಶ್ವಂಭರ ಪ್ರಸಾದ್, ಪೆಟ್ರೋಲ್ ದರವು ಸೀತಾ ಮಾತೆಯ ನೇಪಾಳ ಹಾಗೂ ರಾವಣರ ಲಂಕಾದಲ್ಲಿ ಅಗ್ಗವಾಗಿದೆ. ಹಾಗಿದ್ದರೆ ರಾಮ ಜನ್ಮಭೂಮಿ ಭಾರತದಲ್ಲಿ ಯಾವಾಗ ಕಡಿಮೆ ಮಾಡುತ್ತೀರಿ? ಎಂದು ಕೇಳಿದರು.
ಪೆಟ್ರೋಲ್ ಹಾಗೂ ಡೀಸೆಲ್ ದರ ಬುಧವಾರದಂದು ಮಗದೊಮ್ಮೆ ಸಾರ್ವಾಕಾಲಿಕ ದಾಖಲೆಯನ್ನು ತಲುಪಿತ್ತು. ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 30 ಪೈಸೆ ಹಾಗೂ ಡೀಸೆಲ್‌ಗೆ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆಗೊಂಡಿದ್ದವು.
ಬೆAಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 90.53 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 82.40 ರೂ. ತಲುಪಿದೆ.
ಏತನ್ಮಧ್ಯೆ ಪ್ರತಿಕ್ರಿಯೆ ನೀಡಿರುವ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಇಂಧನ ಬೆಲೆಗಳು ಅಂತರ ರಾಷ್ಟೀಯ ದರ ಆಧರಿಸಿ ನಿರ್ಧಾರವಾಗುತ್ತದೆ. ಹಾಗಿರುವಾಗ ಇಂಧನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ ಎಂದು ಅಪಪ್ರಚಾರ ಮಾಡುತ್ತಿರುವುದು ತಪ್ಪು ಎಂದು ಸಮರ್ಥಿಸಿಕೊಂಡರು.

Leave a Reply

Your email address will not be published. Required fields are marked *

You May Also Like

ಗರ್ಭಿಣಿ ಪತ್ನಿ, ಮಗುವನ್ನು ಬಂಡಿಯಲ್ಲಿ ಕೂರಿಸಿಕೊಂಡು 700 ಕಿ.ಮೀ ನಡೆದ ಪತಿ!

ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ಕೊರೊನಾ ಸಂದಿಗ್ಧತೆ: ಸಿಎಂಗಳ ಜೊತೆ ಪ್ರಧಾನಿ ವಿಡಿಯೋ ಸಂವಾದ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ…

ಮೊಬೈಲ್ ಬಳಕೆ ಬೇಡ ಅಂದಿದ್ದಕ್ಕೆ ಏನ್ ಮಗು ಹೀಗಾ ಮಾಡೋದು!

ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವರ್ಷದ ಹಿಂದೆ ಮದುವೆಯಾಗಿದ್ದ ಯೋಧ ಹುತಾತ್ಮ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ನವದೆಹಲಿ : ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಉಗ್ರರನ್ನು ಸೆದೆಬಡಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.