ಹೈದರಾಬಾದ್ : ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬೀಳುತ್ತಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸರೊಬ್ಬರು ಕಾಪಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಕಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೊಬ್ಬ ಜಾರಿ ಬೀಳುತ್ತಿದ್ದನ್ನು ಅಲ್ಲಿದ್ದ ಮಹಿಳಾ ಕಾನ್ಸ್ಟೇಬಲ್ ಗಮಿನಿಸಿ ಕೂಡಲೇ ಓಡಿ ಹೋಗಿ, ಆತನನ್ನು ಹಿಂದಕ್ಕೆ ಎಳೆದುಕೊಂಡು ಪ್ರಾಣ ಉಳಿಸಿದ್ದಾರೆ. ಈ ವಿಡಿಯೋವನ್ನು ಸದ್ಯ ರೈಲ್ವೆ ಇಲಾಖೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಶೇರ್ ಮಾಡಿದ್ದು, ಜನರು ಮೆಚ್ಚುಗೆ ಗಳಿಸುತ್ತಿದೆ.

ನೆಟ್ಟಿಗರು ಮಹಿಳಾ ಕಾನ್ಸಟೇಬಲ್ ಅವರ ಧೈರ್ಯಕ್ಕೆ ಸಲಾಂ ಎನ್ನುತ್ತಿದ್ದಾರೆ. ಈ ಮಹಿಳಾ ಪೊಲೀಸ್ ಪೇದೆಯ ಹೆಸರು ಮೇರಿ ಸಾಹೇಲಿ ಎಂದು ತಿಳಿದು ಬಂದಿದೆ. ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಒಬ್ಬ ವ್ಯಕ್ತಿಯ ಪ್ರಾಣವನ್ನು ಕಾಪಾಡಿ ಮಾನವೀಯತೆ ಮೆರೆದ ಮಹಿಳೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Leave a Reply

Your email address will not be published. Required fields are marked *

You May Also Like

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.

ಒಂದು ಮಶಿನ್ ಹೊತ್ತ ಟ್ರಕ್: ಮಹಾರಾಷ್ಟ್ರದಿಂದ ಕೇರಳ ತಲುಪಲು ಒಂದು ವರ್ಷ!

ಎಷ್ಟೊತ್ತೋ ಬರಾದು? ನಡಕೊಂಡ್ ಬರಾಕ್ ಹತ್ತೀಯನು?’ ಅಂತೀವಲ್ಲ ಹಂಗಾತಿದು. ಕೇರಳದಲ್ಲಿರುವ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬೃಹತ್ ಯಂತ್ರವೊಂದನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ತಯಾರಿಸಲಾಯಿತು. ಅದರ ತೂಕ, ಎತ್ತರ ಮತ್ತು ಅಗಲದ ಕಾರಣದಿಂದ ಅದನ್ನು ಕೇರಳಕ್ಕೆ ಸಾಗಿಸುವುದೇ ಇಂದು ದೊಡ್ಡ ಸವಾಲಾಗಿತ್ತು. ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಸೂಕ್ಷ್ಮ ಭಾಗಗಳನ್ನು ಒಳಗೊಂಡಿದ್ದರಿಂದ ಹುಷಾರಾಗಿ ಮತ್ತು ನಾಜೂಕಾಗಿ ಅದನ್ನು ಸಾಗಿಸಿ ತರಲಾಗಿದೆ.

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕೋವಿನ್ ಪೋರ್ಟಲ್ ಲಭ್ಯ

ಕೋವಿನ್ ಪೋರ್ಟಲ್ ಹಿಂದಿ ಸೇರಿದಂತೆ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.