ಹಗರಿಬೊಮ್ಮನಹಳ್ಳಿ : ಮನೆಗೆ ಬಾರದ ಪತ್ನಿಯನ್ನು ಕೊಲೆ ಮಾಡಿದ ಪತಿ, ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.

ಹೂವಿನಹಡಗಲಿಯ ಜಿಪಂ ಉಪ ವಿಭಾಗೀಯ ಕಚೇರಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಮನ್ಸೂರಾ ನೂರ್‌ ಆಸ್ಮಾ(30) ಎಂಬುವವರೇ ಕೊಲೆಯಾದ ದುರ್ದೈವಿ. 

ಮೃತ ಮಹಿಳೆ, ಬಲ್ಲಾ ಹುಣ್ಸಿಯ ಶಫಿ ಎಂಬಾತನೊಂದಿಗೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ನಂತರ ಪತಿ, ಕೆಲಸ ತೊರೆದು ನನ್ನೊಂದಿಗೆ ಹಗರಿಬೊಮ್ಮನಹಳ್ಳಿಗೆ ಬರುವಂತೆ ಹೇಳಿದ್ದ. ಇದಕ್ಕೆ ಆಸ್ಮಾ ಒಪ್ಪಿರಲಿಲ್ಲ. ಇದರಿಂದಾಗಿ ಇಬ್ಬರ ನಡುವೆ ಜಗಳವಾಗುತ್ತಿತ್ತು. ಕೊನೆಗೆ ಡಿವೋರ್ಸ್ ಪಡೆಯುವ ನಿರ್ಧಾರಕ್ಕೂ ಇಬ್ಬರೂ ಬಂದಿದ್ದರು.

ಇದರಿಂದ ಕೋಪಗೊಂಡಿದ್ದ ಶಫಿ, ತನ್ನ ಕುತಂತ್ರ ಬುದ್ಧಿ ಉಪಯೋಗಿಸಿ, ಮಹಿಳೆಯ ಮನವೊಲಿಸಿ  ಮನೆಗೆ ಕರೆ ತಂದು, ಪತ್ನಿಯ ವೇಲ್ ನಿಂದಲೇ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಆ ನಂತರ ಇದು ಸಹಜ ಸಾವು ಎಂದು ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ನೀಡಿದ್ದ. ಆನಂತರ ವಿಚಾರಣೆ ಸಂದರ್ಭದಲ್ಲಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. 

Leave a Reply

Your email address will not be published. Required fields are marked *

You May Also Like

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

300 ಮಹಿಳಾ  ಪದವೀಧರರಿಗೆ ಉದ್ಯಮ

ಉತ್ತರಪ್ರಭ ಅರ್ಜಿ ಆಹ್ವಾನಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ…

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.