ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಲಕ್ಷ್ಮೇಶ್ವರ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಅಕ್ಕಿಗುಂದ ದಿಂದ ಲಕ್ಷ್ಮೇಶ್ವರ ಕಡೆಗೆ ಹೊಗುತ್ತಿದ್ದ ಟಾಟಾ ಏಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ರೂಪ್ಲಪ್ಪ ವಾಚಪ್ಪ ಲಮಾಣಿ (65) ಸಾವನ್ನಪ್ಪಿದ್ದು, 5 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಘಾಯಗೊಂಡವರನ್ನು ಗದಗ ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚಾಲಕನಿಗೆ ಗಂಭೀರ ಗಾಯಗೊಂಡವರಲ್ಲಿ ಗಂಗವ್ವ ಲಮಾಣಿ, ಲಕ್ಷ್ಮವ್ವ ಲಮಾಣಿ, ಶಾಂತವ್ವ ಲಮಾಣಿ, ಸಾವತ್ರಮ್ಮ ಲಮಾಣಿ, ರೇಖವ್ವ ಲಮಾಣಿ ಎನ್ನಲಾಗಿದೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version