ಮಧ್ಯಪ್ರದೇಶ: ರಾಜ್ಯ ರಾಜಧಾನಿ ಭೋಪಾಲ್‌ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಮುಳುಗಿದ ಶಂಕೆ ಇದೆ.

ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು. ಅಪಘಾತ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಬೇಕಾದ ಪ್ರಮುಖ ಕಾರ್ಯಕ್ರಮವೊಂದನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಈ ಘಟನೆ ನಡೆದದ್ದು ಅತ್ಯಂತ ವಿಷಾದನೀಯ ಈಗಾಗಲೇ ರಕ್ಷಣಾ ಕಾರ್ಯ ನಡೆಯುತ್ತಿದೆ. ಇಬ್ಬರು ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಗಳಿಗೆ  5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇಡೀ ರಾಜ್ಯವು ಸಂತ್ರಸ್ತರೊದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು!

ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಹಸಿವು ತಾಳದೆ ಸತ್ತ ನಾಯಿಯನ್ನೇ ತಿಂದ ವ್ಯಕ್ತಿ!

ಹಸಿವು ತಾಳಲಾರದೆ ವ್ಯಕ್ತಿಯೋರ್ವ ರಸ್ತೆಯಲ್ಲಿ ಅಪಘಾತವಾಗಿ ಸತ್ತು ಬಿದ್ದಿದ್ದ ನಾಯಿಯನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ.

ಮೋದಿ ಸಭೆಗೆ ಹಾಜರಾಗದ ದೀದಿ!

ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,…