ಅಹಮದಾಬಾದ್: ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಗೋಧ್ರಾ ಪೊಲೀಸರ ತಂಡ, ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿ ಮನೆಯೊಂದರಲ್ಲಿದ್ದ ಭಾತುಕ್ನನ್ನು ಬಂಧಿಸಿತು. ಈತ ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ವ್ಯವಸ್ಥೆ ಮಾಡಿದ್ದ ಮತ್ತು ಗಲಭೆಗೂ ಪ್ರಚೋದನೆ ನೀಡಿದ್ದ. ತನಿಖೆ ಸಂದರ್ಭದಲ್ಲಿ ಈತನ ಹೆಸರು ಕಾಣಿಸಿಕೊಂಡ ತಕ್ಷಣ ದೆಹಲಿಗೆ ಪರಾರಿಯಾಗಿದ್ದ.

ಈತನ ವಿರುದ್ಧ ಕೊಲೆ ಮತ್ತು ಗಲಭೆ ಸೃಷ್ಟಿಸಿದ ಆರೋಪಗಳನ್ನು ಹೊರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

2002 ಫೆಬ್ರುವರಿ 27ರಂದು ರೈಲಿಗೆ ಬೆಂಕಿ ಹಚ್ಚಿದ್ದರಿಂದ 59 ಮಂದಿ ಕರಸೇವಕರು ಸಜೀವ ದಹನವಾಗಿದ್ದರು. ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ಭಾತುಕ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪೆಟ್ರೋಲ್ ಸುರಿದಿದ್ದ. ಬಳಿಕ ಇತರ ಆರೋಪಿಗಳು ಬೆಂಕಿ ಹಚ್ಚಿದ್ದರು. ಗೋಧ್ರಾದಿಂದ ಪರಾರಿಯಾದ ಮೇಲೆ ದೆಹಲಿಯಲ್ಲಿ ಈತ ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಕಟ್ಟಡ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದ ಎಂದು ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ ಡೌನ್..!

2020ರಲ್ಲಿ ಲಾಕ್‌ ಡೌನ್‌ ನಿಂದ ಬೇಸತ್ತ ಜನ ಈಗ ಮತ್ತದೇ ಲಾಕ್‌ ಡೌನ್‌ ಮೊರೆ ಹೋಗುವ ಅನಿವಾರ್ಯತೆ ಇದೆ. ಯಾಕೆಂದರೆ, ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ಕೊರೊನಾ ವೈರಸ್‌ ಹರಡುತ್ತಿದ್ದು, ಅಲ್ಲಿನ ಜನ ತ್ತರಿಸಿ ಹೋಗಿದ್ದಾರೆ. ಈಗಾಗಲೇ ಬ್ರಿಟನ್‌ ಅಲ್ಲದೇ, ಬೇರೆ ದೇಶಗಳಿಗೂ ಈ ವೈರಸ್‌ ಹಬ್ಬಿದ್ದು, ಭಾರತವೇನು ಹೊರತಾಗಿಲ್ಲ.

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.