ಅಹಮದಾಬಾದ್: ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಗೋಧ್ರಾ ಪೊಲೀಸರ ತಂಡ, ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿ ಮನೆಯೊಂದರಲ್ಲಿದ್ದ ಭಾತುಕ್ನನ್ನು ಬಂಧಿಸಿತು. ಈತ ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ವ್ಯವಸ್ಥೆ ಮಾಡಿದ್ದ ಮತ್ತು ಗಲಭೆಗೂ ಪ್ರಚೋದನೆ ನೀಡಿದ್ದ. ತನಿಖೆ ಸಂದರ್ಭದಲ್ಲಿ ಈತನ ಹೆಸರು ಕಾಣಿಸಿಕೊಂಡ ತಕ್ಷಣ ದೆಹಲಿಗೆ ಪರಾರಿಯಾಗಿದ್ದ.

ಈತನ ವಿರುದ್ಧ ಕೊಲೆ ಮತ್ತು ಗಲಭೆ ಸೃಷ್ಟಿಸಿದ ಆರೋಪಗಳನ್ನು ಹೊರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

2002 ಫೆಬ್ರುವರಿ 27ರಂದು ರೈಲಿಗೆ ಬೆಂಕಿ ಹಚ್ಚಿದ್ದರಿಂದ 59 ಮಂದಿ ಕರಸೇವಕರು ಸಜೀವ ದಹನವಾಗಿದ್ದರು. ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ಭಾತುಕ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪೆಟ್ರೋಲ್ ಸುರಿದಿದ್ದ. ಬಳಿಕ ಇತರ ಆರೋಪಿಗಳು ಬೆಂಕಿ ಹಚ್ಚಿದ್ದರು. ಗೋಧ್ರಾದಿಂದ ಪರಾರಿಯಾದ ಮೇಲೆ ದೆಹಲಿಯಲ್ಲಿ ಈತ ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಕಟ್ಟಡ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದ ಎಂದು ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಕುರಿತು ಪರಿಶೀಲಿಸುವ ಚಿಂತನೆ ನಡೆದಿದೆ : ಪ್ರಧಾನಿ ಮೋದಿ

ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳನ್ನು ಘೋಷಿಸಿದರು. ಇನ್ನು ಇದೇ ವೇಳೆ ದೇಶದ…

ಮುಂಬಯಿನ ಶಾಪಿಂಗ್ ಮಾಲ್ ವೊಂದಕ್ಕೆ ಬೆಂಕಿ – ಸಾವಿರಾರು ಜನರ ರಕ್ಷಣೆ!

ಮುಂಬಯಿ : ಇಲ್ಲಿಯ ದಕ್ಷಿಣ ಮುಂಬಯಿನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮವಾಗಿ ಸಾವಿರಾರು ಜನರನ್ನು ರಕ್ಷಿಸಲಾಗಿದೆ.

ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿರುವ ಪೆಟ್ರೋಲ್ ಬೆಲೆ.

ಕಳೆದ ವರ್ಷ ಮೇ ತಿಂಗಳಿಂದ ಇಲ್ಲಿಯವರೆಗೆ ಪೆಟ್ರೋಲ್ ಬೆಲೆಯು 31ರೂ 95 ಪೈಸೆ ಹಾಗೂ ಡೀಸೆಲ್ ಬೆಲೆ 27ರೂ 58 ಪೈಸೆಗೆ ಏರಿಕೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.