ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿ ಸೌಲಭ್ಯ ನೀಡುವುದಕ್ಕೆ ಇದೇ ಪ್ರವರ್ಗದಡಿ ಬರುವ ಇತರೆ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಪಂಚಮಸಾಲಿ ಸಮುದಾಯವನ್ನುಪ್ರವರ್ಗ 2 ಅಡಿ ಸೇರ್ಪಡೆ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿರುವ ಇತರೆ ಜಾತಿಗಳು, ಪ್ರವರ್ಗ 2 ಪಟ್ಟಿಯಲ್ಲಿ 410ಕ್ಕೂ ಹೆಚ್ಚು ಜಾತಿಗಳು ಸೇರಿವೆ. ವರ್ಗಕ್ಕೆ ಪ್ರಸ್ತುತ ಶೇ.15ರಷ್ಟು ಮಾತ್ರ ಮೀಸಲಾತಿ ಸೌಲಭ್ಯವಿದೆ. ಹೀಗಿರುವಾಗ ಪಂಚಮಸಾಲಿ ಲಿಂಗಾಯತ ಸಮುದಾಯದವರು ಇದೇ ಪ್ರವರ್ಗದಡಿ ಮೀಸಲಾತಿಗೆ ಮನವಿ ಮಾಡುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಪಂಚಮಸಾಲಿ ಲಿಂಗಾಯತರನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಿದಲ್ಲಿ ಇದೇ ಪ್ರವರ್ಗದಲ್ಲಿರುವ ಇತರೆ ಜಾತಿಗಳಿಗೆ ಅನ್ಯಾಯವಾಗಲಿದೆ ಎಂದು ವಿರೋದಿಸುತ್ತಿವೆ.

ಪಂಚಮಸಾಲಿ ಸಮುದಾಯ ಆರ್ಥಿಕವಾಗಿ ಪ್ರಬಲರಾಗಿದೆ. ಅವರನ್ನು ಯಾವುದೇ ಕಾರಣಕ್ಕೂ ಪ್ರವರ್ಗ 2ಎ ಗೆ ಸೇರಿಸಬಾರದು ಎಂದು ಕೋರಿದ್ದಾರೆ. ಕುರಿತು ಹಲವು ಜಾತಿಗಳ ಮುಖಂಡರು ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆಂದು ಆಯೋಗದ ಉನ್ನತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಮುಂಡರಗಿ ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ

ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ಸಾವನ್ನು ಗೆದ್ದು ಬಂದ 8 ತಿಂಗಳ ಮಗು

ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ.