ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿ ಸೌಲಭ್ಯ ನೀಡುವುದಕ್ಕೆ ಇದೇ ಪ್ರವರ್ಗದಡಿ ಬರುವ ಇತರೆ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಪಂಚಮಸಾಲಿ ಸಮುದಾಯವನ್ನುಪ್ರವರ್ಗ 2 ಅಡಿ ಸೇರ್ಪಡೆ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿರುವ ಇತರೆ ಜಾತಿಗಳು, ಪ್ರವರ್ಗ 2 ಪಟ್ಟಿಯಲ್ಲಿ 410ಕ್ಕೂ ಹೆಚ್ಚು ಜಾತಿಗಳು ಸೇರಿವೆ. ವರ್ಗಕ್ಕೆ ಪ್ರಸ್ತುತ ಶೇ.15ರಷ್ಟು ಮಾತ್ರ ಮೀಸಲಾತಿ ಸೌಲಭ್ಯವಿದೆ. ಹೀಗಿರುವಾಗ ಪಂಚಮಸಾಲಿ ಲಿಂಗಾಯತ ಸಮುದಾಯದವರು ಇದೇ ಪ್ರವರ್ಗದಡಿ ಮೀಸಲಾತಿಗೆ ಮನವಿ ಮಾಡುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಪಂಚಮಸಾಲಿ ಲಿಂಗಾಯತರನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಿದಲ್ಲಿ ಇದೇ ಪ್ರವರ್ಗದಲ್ಲಿರುವ ಇತರೆ ಜಾತಿಗಳಿಗೆ ಅನ್ಯಾಯವಾಗಲಿದೆ ಎಂದು ವಿರೋದಿಸುತ್ತಿವೆ.

ಪಂಚಮಸಾಲಿ ಸಮುದಾಯ ಆರ್ಥಿಕವಾಗಿ ಪ್ರಬಲರಾಗಿದೆ. ಅವರನ್ನು ಯಾವುದೇ ಕಾರಣಕ್ಕೂ ಪ್ರವರ್ಗ 2ಎ ಗೆ ಸೇರಿಸಬಾರದು ಎಂದು ಕೋರಿದ್ದಾರೆ. ಕುರಿತು ಹಲವು ಜಾತಿಗಳ ಮುಖಂಡರು ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆಂದು ಆಯೋಗದ ಉನ್ನತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

” ಶಿಕ್ಷಕ- ಮಕ್ಕಳಲ್ಲಿ ನವ ಚೇತನ ತುಂಬಿದ ವಿಷಯ ವೇದಿಕೆ ” ಚಿತ್ರಕಲೆ ಪಠ್ಯಗಳ ಜೀವಾಳ

ಉತ್ತರಪ್ರಭ ಸುದ್ದಿವಿಜಯಪುರ: ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಹಾಗು ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಸಹಕಾರಿಯಾಗಿದೆ ಅಲ್ಲದೇ ಪಠ್ಯಾಧಾರೀತ…

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 44 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 44 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 414 ಕ್ಕೆ…

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.