ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿ ಸೌಲಭ್ಯ ನೀಡುವುದಕ್ಕೆ ಇದೇ ಪ್ರವರ್ಗದಡಿ ಬರುವ ಇತರೆ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಪಂಚಮಸಾಲಿ ಸಮುದಾಯವನ್ನುಪ್ರವರ್ಗ 2 ಅಡಿ ಸೇರ್ಪಡೆ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿರುವ ಇತರೆ ಜಾತಿಗಳು, ಪ್ರವರ್ಗ 2 ಪಟ್ಟಿಯಲ್ಲಿ 410ಕ್ಕೂ ಹೆಚ್ಚು ಜಾತಿಗಳು ಸೇರಿವೆ. ವರ್ಗಕ್ಕೆ ಪ್ರಸ್ತುತ ಶೇ.15ರಷ್ಟು ಮಾತ್ರ ಮೀಸಲಾತಿ ಸೌಲಭ್ಯವಿದೆ. ಹೀಗಿರುವಾಗ ಪಂಚಮಸಾಲಿ ಲಿಂಗಾಯತ ಸಮುದಾಯದವರು ಇದೇ ಪ್ರವರ್ಗದಡಿ ಮೀಸಲಾತಿಗೆ ಮನವಿ ಮಾಡುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಪಂಚಮಸಾಲಿ ಲಿಂಗಾಯತರನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಿದಲ್ಲಿ ಇದೇ ಪ್ರವರ್ಗದಲ್ಲಿರುವ ಇತರೆ ಜಾತಿಗಳಿಗೆ ಅನ್ಯಾಯವಾಗಲಿದೆ ಎಂದು ವಿರೋದಿಸುತ್ತಿವೆ.

ಪಂಚಮಸಾಲಿ ಸಮುದಾಯ ಆರ್ಥಿಕವಾಗಿ ಪ್ರಬಲರಾಗಿದೆ. ಅವರನ್ನು ಯಾವುದೇ ಕಾರಣಕ್ಕೂ ಪ್ರವರ್ಗ 2ಎ ಗೆ ಸೇರಿಸಬಾರದು ಎಂದು ಕೋರಿದ್ದಾರೆ. ಕುರಿತು ಹಲವು ಜಾತಿಗಳ ಮುಖಂಡರು ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆಂದು ಆಯೋಗದ ಉನ್ನತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಆಯಾ ರಾಜ್ಯಗಳ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕಪ್ರವೇ: ಮನವಿ

ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳನ್ನು ಆಯಾ ರಾಜ್ಯದ ಮಾತೃ ಭಾಷೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾಪರ ವೇದಿಕೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…

ಪ್ರಧಾನಿ ನರೇಂದ್ರ ಮೋದಿ ಅವರ ಸದ್ಯದ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಜನರು ಸತ್ತ ಮೇಲೆ ಅವರಿಗೆ ದುಡ್ಡು ಕೊಡುತ್ತೀರಾ?

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಕೊರೊನಾ ಸಮಯದಲ್ಲಿ ಪ್ರತಿಭಟನೆಯಿಂದ ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಎದುರಾಗಿವೆ.