ದೆಹಲಿ: ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶಾದ್ಯಂತ ರೈಲು ತಡೆಗೆ ಕರೆ ನೀಡಿದ್ದು, ಈ ಕರೆಗೆ ಓಗೊಟ್ಟು ರಾಜ್ಯ ರೈತ ಸಂಘಟನೆಗಳು ರಾಜ್ಯದಾದ್ಯಂತ ರೈಲು ತಡೆ ಚಳವಳ ನಡೆಸಲಿದ್ದಾ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ದೆಹಲಿ ರೈತ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ರೈತ ಚಳುವಳಿಯ ಹತ್ತಿಕ್ಕುವ ಪ್ರಯತ್ನಕೆ ಹೆಚ್ಚು ಒತ್ತು ನೀಡುತ್ತಿದೆ.

ನಾಟಕೀಯವಾಗಿ ವರ್ತಿಸುತ್ತಿದೆ ಇದನ್ನು ಖಂಡಿಸಿ ದೇಶಾದ್ಯಂತ ಫೆಬ್ರವರಿ 18 ರಂದು ಮಧ್ಯಾಹ್ನ 12 ರಿಂದ 3ರ ವರೆಗೆ ರೈಲು ತಡೆ ಚಳವಳಿ ನಡೆಸಲು ಕರೆ ನೀಡಿರುವುದನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದಿಂದ ಚಳವಳಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ದೇಶದಲ್ಲಿ ಅನಧಿಕೃತ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆ ಕಾಣುತ್ತಿದೆ, ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶ ರಂಜನ್ ಗೊಗಾಯ್ ಬಡಜನರಿಗೆ ದುಡಿಯುವ ವರ್ಗಕ್ಕೆ ನ್ಯಾಯಾಲಯಗಳಲ್ಲಿ ನ್ಯಾಯ ಸಿಗುವುದು ಕಷ್ಟಕರವಾಗಿದೆ ಎನ್ನುತ್ತಾರೆ.

ಪ್ರಜಾಪ್ರಭುತ್ವ ಅಪಾಯಕಾರಿ ಪರಿಸ್ಥಿತಿಯಲ್ಲಿ ಸಾಗುತ್ತಿದೆ. ಬಂಡವಾಳಶಾಹಿಗಳ ಶ್ರೀಮಂತರ ವಶಕ್ಕೆ ಸಿಲುಕುತ್ತಿದೆ. ಇಂಥ ವಿಚಾರಗಳ ಬಗ್ಗೆ ಪ್ರತಿಯೊಬ್ಬರು ಚಿಂತಿಸಬೇಕಾಗಿದೆ. ಕೇಂದ್ರ ಸರ್ಕಾರ ಎಮ್ಮೆ ಚರ್ಮದ ಸರ್ಕಾರ. ಮಳೆ ಚಳಿ ಗಾಳಿ ಬಿಸಿಲು ಯಾವುದಕ್ಕೂ ಪ್ರತಿಕ್ರಿಯೆ ಇಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರೈತ ಉತ್ಪನ್ನಗಳಿಗೆ ಕನಿಷ್ಠ ಶಾಸನಬದ್ಧ ಬೆಲೆ ಖಾತ್ರಿಗೊಳಿಸಿದ ಸರ್ಕಾರ. ಕೃಷಿ ಉತ್ಪನ್ನ ಖರೀದಿಸಲು ಯಾವುದೇ ನಿಯಂತ್ರಣವಿಲ್ಲದ ರಹದಾರಿ ಇಲ್ಲದವರು. ಎಷ್ಟು ಬೇಕಾದರೂ ಎಲ್ಲಿ ಬೇಕಾದರೂ ಖರೀದಿಸಬಹುದು ಎನ್ನುವ ವ್ಯಾಪಾರಕ್ಕೆ ಕಾನೂನು ಮೂಲಕ ಖಾಸಗಿಯವರಿಗೆ ಅವಕಾಶ ಕೊಡಲಾಗಿದೆ. ಯಾವುದೇ ಅನುಮತಿ ಇಲ್ಲದವರು ವ್ಯಾಪಾರ ಮಾಡುವಾಗ ರೈತರಿಗೆ ವಂಚನೆ ಮಾಡಿದ್ದಾಗ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ನ್ಯಾಯಾಲಯಕ್ಕೆ ಹೋಗುವುದನ್ನು ಕಿತ್ತು ಹಾಕಲಾಗಿದೆ. ಇದೆಲ್ಲಾ ಜನಪ್ರತಿನಿಧಿಗಳಿಗೆ ಯಾಕೆ ಅರ್ಥವಾಗುತ್ತಿಲ್ಲ, ರಾಜ್ಯ ಸರ್ಕಾರ ಮಂಡಿಸುವ ಮುಂದಿನ ಬಜೆಟ್ನಲ್ಲಿ ಕಬ್ಬಿನ ಎಫ್ಆರ್ ಪಿ ಬೆಲೆಯನ್ನು ರೈತರ ಹೊಲದಲ್ಲಿನ ದರ ಎಂದು ರಾಜ್ಯಸರ್ಕಾರವೇ ನಿಗದಿ ಮಾಡುವಂತಾಗಬೇಕು. ಕಬ್ಬಿಗೆ ಫಸಲ್ ಭೀಮಾ ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕು. ಹಣ್ಣು-ತರಕಾರಿ ಎಲ್ಲ ಬೆಳೆಗಳಿಗೆ ಶಾಸನಬದ್ಧ ಖಾತ್ರಿ ಕನಿಷ್ಠ ಬೆಂಬಲ ಬೆಲೆ ನಿಗದಿಮಾಡುವ ಮಾನದಂಡ ಜಾರಿಗೆ ಬರಬೇಕು. ಕೇರಳ ರಾಜ್ಯದ ಮಾದರಿಯಲ್ಲಿ ರಾಜ್ಯದಲ್ಲಿ, ಆರು ತಿಂಗಳಿಗೊಮ್ಮೆ ಸಕ್ಕರೆ ಸಚಿವರು, ಸಕ್ಕರೆ ಅಭಿವೃದ್ಧಿ ಆಯುಕ್ತರು ಬದಲಾಗುತ್ತಿರುವುದು ಕಬ್ಬು ಬೆಳೆಗಾರರ ಸಮಸ್ಯೆಗಳು ಏರಿಕೆಯಾಗಲು ಹಾಗೂ ಪರಿಹಾರ ಸಿಗಲು ಕಷ್ಟವಾಗುತ್ತಿದೆ. ಕಬ್ಬು ಬೆಳೆಗಾರರಿಗೆ 4 ಸಾವಿರ ಕೋಟಿ ಕಬ್ಬಿನ ಹಣ ಬಾಕಿ ಬರಬೇಕಾಗಿದೆ. ಇದನ್ನು ಕೊಡಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಚರ್ಚಿಸಿದ ಮೋದಿ – ಯಾವೆಲ್ಲ ಚರ್ಚೆಗಳಾದವು?

ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಕುರಿತು ಮತ್ತು ಆರ್ಥಿಕ ಚಟುವಚಿಕೆ ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.

ಕೇಂದ್ರ ವಿಧಿಸಿದ 4 ನೇ ಹಂತದ ಲಾಕ್ ಡೌನ್ ನಿಯಮಗಳೇನು?

ಇಂದಿನಿಂದಲೆ ಕೆಲವು ನಿಯಮಗಳನ್ನು ಅಳವಡಿಸಿ ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಡ್ ಡೌನ್ ಜಾರಿ ಮಾಡಿ ಆದೇಶಿಸಿದೆ. ಮೇ 31ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ಅಂತಾ ನೋಡಿ

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ