ಚಾಮರಾಜನಗರ: ದೀಪಾವಳಿಗೆ ಗೋಮಾತೆ ಪೂಜಿಸುತ್ತೀರಿ, ಸಂಕ್ರಾಂತಿಗೆ ಪೂಜೆ ಮಾಡ್ತೀರಿ ಮತ್ತೆ ಗೋಮಾತೆಯನ್ನು ಕಟ್ ಯಾಕ್ ಮಾಡ್ತೀರಿ, ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪ್ರಶ್ನಿಸಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇದ ಕಾಯ್ದೆಯಲ್ಲಿ ಯಾವುದೇ ಕಾಂಟ್ರೊವರ್ಸಿ ಇಲ್ಲಾ, ಒಂದು ವರ್ಷ ಸಮಯ ಕೊಡಿ, ಗೋ ಮೂತ್ರ, ಸಗಣಿ ಹಾಗೂ ಇತರೆ ಗೋ ಉತ್ಪನ್ನಗಳು ಹೇಗೆ ಲಾಭದಾಯಕವಾಗಲಿದೆ ಎಂದು ತೋರಿಸುತ್ತೇನೆ. ಗೋ ಹತ್ಯೆ ಮಾಡುವುದರಿಂದ ಏನು ಸಿಗದು, ಈಗಾಗಲೇ, 19 ರಾಜ್ಯಗಳಲ್ಲಿ ಗೋಹತ್ಯೆ ನಿಷೇಧವಾಗಿದೆ, ಈ ಕಾಯ್ದೆಯಿಂದ ರೈತರಿಗೆ ಲಾಭವಿದೆ ಎಂದು ಅವರು ಹೇಳಿದರು.

ಇನ್ನು, ರಾಮಮಂದಿರಕ್ಕೆ ಹಣ ಕೊಡಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಕೊಡಲ್ಲ ಅಂತಾರೆ ಅವರ ಮಗ ದೇಣಿಗೆ ಕೊಟ್ಟಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹಣ ಪಡೆದಿರುವ ಲೆಕ್ಕ ಪಾರದರ್ಶಕವಾಗಿದ್ದು, ಪ್ರತಿಯೊಂದಕ್ಕೂ ಲೆಕ್ಕ ಕೊಡುತ್ತೇವೆ ಎಂದರು.

ದೇಣಿಗೆ ಕೊಡದ ಮನೆಗಳನ್ನು ಗುರುತು ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ, ವಿಪಕ್ಷಗಳ ಕೆಲಸವೇ ವಿರೋಧಿಸುವುದು, ಅವರು ಬರೀ ಸುಳ್ಳು ಹೇಳಿದ್ದಾರೆ, ಅವರು ವಿರೋಧಿಸಲಿ ನಾವು ಕೆಲಸ ಮಾಡುತ್ತೇವೆಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ಬಾಲೆ ಸೃುಷ್ಟಿ ಜಾಧವ

ಉತ್ತರಪ್ರಭವಿಜಯಪುರ: ಅವಳಿಗೆ ಅಜ್ಜಿಯಂದರೆ ಪ್ರಾಣ. ಕಾಕಾ ಎಂದರೆ ಎಲ್ಲಿಲ್ಲದ ಪ್ರೀತಿ. ಈ ಅಕ್ಕರೆಯ ಸಿಹಿ ಸಿಂಚನದ…

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಎಸಿಬಿ ಬಲೆಗೆ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…

ರಾಜ್ಯದಲ್ಲಿ ಮತ್ತೆ 22 ಕೊರೋನಾ ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಮತ್ತೆ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.