ಚಾಮರಾಜನಗರ: ದೀಪಾವಳಿಗೆ ಗೋಮಾತೆ ಪೂಜಿಸುತ್ತೀರಿ, ಸಂಕ್ರಾಂತಿಗೆ ಪೂಜೆ ಮಾಡ್ತೀರಿ ಮತ್ತೆ ಗೋಮಾತೆಯನ್ನು ಕಟ್ ಯಾಕ್ ಮಾಡ್ತೀರಿ, ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪ್ರಶ್ನಿಸಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇದ ಕಾಯ್ದೆಯಲ್ಲಿ ಯಾವುದೇ ಕಾಂಟ್ರೊವರ್ಸಿ ಇಲ್ಲಾ, ಒಂದು ವರ್ಷ ಸಮಯ ಕೊಡಿ, ಗೋ ಮೂತ್ರ, ಸಗಣಿ ಹಾಗೂ ಇತರೆ ಗೋ ಉತ್ಪನ್ನಗಳು ಹೇಗೆ ಲಾಭದಾಯಕವಾಗಲಿದೆ ಎಂದು ತೋರಿಸುತ್ತೇನೆ. ಗೋ ಹತ್ಯೆ ಮಾಡುವುದರಿಂದ ಏನು ಸಿಗದು, ಈಗಾಗಲೇ, 19 ರಾಜ್ಯಗಳಲ್ಲಿ ಗೋಹತ್ಯೆ ನಿಷೇಧವಾಗಿದೆ, ಈ ಕಾಯ್ದೆಯಿಂದ ರೈತರಿಗೆ ಲಾಭವಿದೆ ಎಂದು ಅವರು ಹೇಳಿದರು.

ಇನ್ನು, ರಾಮಮಂದಿರಕ್ಕೆ ಹಣ ಕೊಡಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಕೊಡಲ್ಲ ಅಂತಾರೆ ಅವರ ಮಗ ದೇಣಿಗೆ ಕೊಟ್ಟಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹಣ ಪಡೆದಿರುವ ಲೆಕ್ಕ ಪಾರದರ್ಶಕವಾಗಿದ್ದು, ಪ್ರತಿಯೊಂದಕ್ಕೂ ಲೆಕ್ಕ ಕೊಡುತ್ತೇವೆ ಎಂದರು.

ದೇಣಿಗೆ ಕೊಡದ ಮನೆಗಳನ್ನು ಗುರುತು ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ, ವಿಪಕ್ಷಗಳ ಕೆಲಸವೇ ವಿರೋಧಿಸುವುದು, ಅವರು ಬರೀ ಸುಳ್ಳು ಹೇಳಿದ್ದಾರೆ, ಅವರು ವಿರೋಧಿಸಲಿ ನಾವು ಕೆಲಸ ಮಾಡುತ್ತೇವೆಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಮಣಿಪುರ ವಿದ್ಯಾರ್ಥಿ ಸಂಘದಿಂದ ಸಚಿವ ಸಿ.ಸಿ.ಪಾಟೀಲ್ ಸಹಾಯಕ್ಕೆ ಕೃತಜ್ಞತೆ

ಮಣಿಪುರ ರಾಜ್ಯದ ವಿದ್ಯಾರ್ಥಿಗಳ ಸಂಘಕ್ಕೆ ಸಹಾಯ ಮಾಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರಿಗೆ ಮಣಿಪುರ ವಿದ್ಯಾರ್ಥಿ ಸಂಘ ಟ್ವೀಟ್ ಮೂಲಕ ಅಭಿನಂದಿಸಿದೆ.