ದಾವಣಗೆರೆ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಶಾಮನೂರು ಒಡೆತನದ ದಾವಣಗೆರೆಯ ಮೂರು ಕಾಲೇಜುಗಳಲ್ಲಿ ಅಧಿಕಾರಿಗಳಿಂದ ಕಡತ ಪರಿಶೀಲಸಲಾಗಿದೆ. ಆರು ಜನ ಐಟಿ ಅಧಿಕಾರಿಗಳ ತಂಡ ದಾವಣಗೆರೆ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್ ಗಳಲ್ಲಿ ದಾಳಿ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರವೇಶ ಹಾಗೂ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ವಾಗಿ ಭೇಟಿ ಮಾಡಿ ಶುಲ್ಕ ತುಂಬದ ವಿವರವನ್ನು ಅಧಿಕಾರಿಗಳು ಪಡೆಯುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯಿಂದ ಬಂದ ಐಟಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ.