ದಾವಣಗೆರೆ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಶಾಮನೂರು ಒಡೆತನದ ದಾವಣಗೆರೆಯ ಮೂರು ಕಾಲೇಜುಗಳಲ್ಲಿ ಅಧಿಕಾರಿಗಳಿಂದ ಕಡತ ಪರಿಶೀಲಸಲಾಗಿದೆ. ಆರು ಜನ ಐಟಿ ಅಧಿಕಾರಿಗಳ ತಂಡ ದಾವಣಗೆರೆ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್ ಗಳಲ್ಲಿ ದಾಳಿ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರವೇಶ ಹಾಗೂ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಲ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ವಾಗಿ ಭೇಟಿ ಮಾಡಿ ಶುಲ್ಕ ತುಂಬದ ವಿವರವನ್ನು  ಅಧಿಕಾರಿಗಳು ಪಡೆಯುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯಿಂದ ಬಂದ ಐಟಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ.

Leave a Reply

Your email address will not be published. Required fields are marked *

You May Also Like

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

2ನೆ ವಾರ್ಡ ಕಾಂಗ್ರೆಸ್ ಮತ್ತು 14 ನೆ ವಾರ್ಡ ಜೆಪಿಗೆ ಜಯ

ಗದಗ : ನಗರಸಭೆ ಚುನಾವಣೆ 2ನೆ ವಾರ್ಡ ಕಾಂಗ್ರೆಸ್ ಮತ್ತು 14 ನೆ ವಾರ್ಡ ಬಿ…

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9399…