ಲಕ್ಷ್ಮೇಶ್ವರ: ಪಟ್ಟಣದಿಂದ ಗದಗ ನಗರಕ್ಕೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದರು.

ಈ ವೇಳೆ ಎಬಿವಿಪಿ ಸಂಚಾಲಕ ಮಾಂತೇಶ ಮಣಕವಾಡ ಮಾತನಾಡಿ, ಲಕ್ಷ್ಮೇಶ್ವರದಿಂದ ಬೆಳಗಿನ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಪ್ರಯಾಣಿಸುತ್ತಾರೆ. ಆದರೆ ಬಸ್‍ಗಳ ಕೊರತೆ ಇರುವುದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹಿಗಾಗಿ ಮುಂಜಾನೆ ವೇಳೆ ಹೆಚ್ಚಿನ ಬಸ್‍ಗಳು ಸಂಚರಿಸುವಂತಾಗಬೇಕು. ರಾಮಗಿರಿ ಸಮೀಪದ ಬಸಾಪುರ ಗ್ರಾಮಕ್ಕೆ ಬಸ್ ಸೌಲಭ್ಯ ಕಡಿಮೆ ಇದ್ದು ಗ್ರಾಮಕ್ಕೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಮಾಡಬೇಕು ಎಂದು ಈ ವೇಳೆ ಒತ್ತಾಯಿಸಿದರು.

ಪ್ರತಿಭಟನೆಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕ ಕೆ.ಶೇಖರ ನಾಯ್ಕ, ಕೊರೊನಾ ಕಾರಣದಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಅವಶ್ಯ ಇದ್ದಲ್ಲಿ ಹೆಚ್ಚಿನ ಬಸ್ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಆರ್.ಎಚ್.ದೇಶಪಾಂಡೆ, ಬಸವರಾಜ ಚಕ್ರಸಾಲಿ, ಲಿಂಗರಜ ಶಿರಹಟ್ಟಿ, ರಾಜು ಜೋಗೇರ, ವಿಜಯ ರಬಗಣ್ಣವರ, ಜಿ.ಮಂಜುನಾಥ, ಶಶಿಕಲಾ ತೋಟದ, ವೀಣಾ ಗುಂಡಮಿ, ಪೂರ್ಣಿಮಾ ಹೊಟ್ಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಎಚ್.ಡಿ.ದೇವೇಗೌಡರಿಗೆ ಕೃತಜ್ಞತೆ ಸಲ್ಲಿಸಿದ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಬೇಟಿ ಕೊಟ್ಟು ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಮರ್ಪಿಸಿದರು.

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ…

ಕೋವಿಡ್-19 ನಿಯಂತ್ರಣ: ಲಾಕ್ಡೌನ್‍ನಿಂದ ಕೆಲವು ಚಟುವಟಿಕೆಗಳಿಗೆ ವಿನಾಯ್ತಿ

ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿರುವ ಗದಗ ತಾಲೂಕು ಹೊರತುಪಡಿಸಿ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ನರಗುಂದ ತಾಲೂಕುಗಳಲ್ಲಿ ಕೈಗಾರಿಕೆ, ವ್ಯಾಪಾರ ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.