ಲಕ್ಷ್ಮೇಶ್ವರ: ಪಟ್ಟಣದಿಂದ ಗದಗ ನಗರಕ್ಕೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದರು.

ಈ ವೇಳೆ ಎಬಿವಿಪಿ ಸಂಚಾಲಕ ಮಾಂತೇಶ ಮಣಕವಾಡ ಮಾತನಾಡಿ, ಲಕ್ಷ್ಮೇಶ್ವರದಿಂದ ಬೆಳಗಿನ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಪ್ರಯಾಣಿಸುತ್ತಾರೆ. ಆದರೆ ಬಸ್‍ಗಳ ಕೊರತೆ ಇರುವುದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹಿಗಾಗಿ ಮುಂಜಾನೆ ವೇಳೆ ಹೆಚ್ಚಿನ ಬಸ್‍ಗಳು ಸಂಚರಿಸುವಂತಾಗಬೇಕು. ರಾಮಗಿರಿ ಸಮೀಪದ ಬಸಾಪುರ ಗ್ರಾಮಕ್ಕೆ ಬಸ್ ಸೌಲಭ್ಯ ಕಡಿಮೆ ಇದ್ದು ಗ್ರಾಮಕ್ಕೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಮಾಡಬೇಕು ಎಂದು ಈ ವೇಳೆ ಒತ್ತಾಯಿಸಿದರು.

ಪ್ರತಿಭಟನೆಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕ ಕೆ.ಶೇಖರ ನಾಯ್ಕ, ಕೊರೊನಾ ಕಾರಣದಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಅವಶ್ಯ ಇದ್ದಲ್ಲಿ ಹೆಚ್ಚಿನ ಬಸ್ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಆರ್.ಎಚ್.ದೇಶಪಾಂಡೆ, ಬಸವರಾಜ ಚಕ್ರಸಾಲಿ, ಲಿಂಗರಜ ಶಿರಹಟ್ಟಿ, ರಾಜು ಜೋಗೇರ, ವಿಜಯ ರಬಗಣ್ಣವರ, ಜಿ.ಮಂಜುನಾಥ, ಶಶಿಕಲಾ ತೋಟದ, ವೀಣಾ ಗುಂಡಮಿ, ಪೂರ್ಣಿಮಾ ಹೊಟ್ಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಅತಿವೃಷ್ಟಿಯಿಂದ ರಾಜ್ಯದಲ್ಲಾದ ನಷ್ಟ ಎಷ್ಟು ಗೊತ್ತಾ..?

ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸನೇ ಇಲ್ಲಿ ಕಿರುಕುಳ ನೀಡಿದ್ದಾನೆ!!

ನವದೆಹಲಿ : ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಬ್ ಇನ್ಸಪೆಕ್ಟರ್ ಒಬ್ಬರನ್ನು ಬಂಧಿಸಿದ್ದಾರೆ.

ಸರಕಾರಿ ಹುದ್ದೆಗಳ ನೇಮಕಾತಿ: “ವಯೋಮಿತಿ ಪರಿಷ್ಕರಣೆಗೆ” ನಿರುದ್ಯೋಗಿಗಳ ಆಗ್ರಹ

ಉತ್ತರಪ್ರಭ ಸುದ್ದಿ ರಾಯಬಾಗ: “ರಾಜ್ಯ ಸರಕಾರ ಈಗ ಮೂರ್ನಾಲ್ಕು ವರುಷ ಕೋವಿಡ್ ವ್ಯಾಪಕವಾಗಿ ಹರಡಿ, ಲಾಕಡೊನ್…

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…