ನವದೆಹಲಿ: ಕೇಂದ್ರಾಡಳಿತ ಪ್ರದೇಶ ಕಾಶ್ಮೀರಕ್ಕೆ ವಿದೇಶಿ ಪ್ರತಿನಿಧಿಗಳ ನಿಯೋಗದ ಭೇಟಿಯ ಬೆನ್ನಲ್ಲೆ ಕಣಿವೆಯಲ್ಲಿ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿ ಆತಂಕ ಹುಟ್ಟಿಸಿದೆ.

ರಜೌರಿ ಜಿಲ್ಲೆಯ ಮಂಜಾಕೋಟ್‍ ಹೆದ್ದಾರಿಯಲ್ಲಿ ಈ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಹೆದ್ದಾರಿಗುಂಟ ಹೈ ಅಲರ್ಟ್ ಘೋಸಿಸಲಾಗಿದೆ. ಕಟ್ಟಿಗೆಯ ಬಾಕ್ಸ್‍ ನಲ್ಲಿ ಅಡುಗೆಗೆ ಬಳಸುವ ಕುಕ್ಕರ್ ರೀತಿಯ ಪಾತ್ರೆ ಇಡಲಾಗಿದೆ. ಬುಧವಾರ ಬೆಳಗ್ಗೆ ಈ ಘಟನೆ ವರದಿಯಾಗಿದ್ದು, ಸ್ಥಳದಲ್ಲಿ ಬಾಂಬ್‍ ನಿಷ್ಕ್ರಿಯ ದಳ ಹಾಗೂ ಭದ್ರತಾ ಪಡೆಗಳು ಜಮಾಯಿಸಿವೆ.

ವಸ್ತು ಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಹೆದ್ದಾರಿ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ನಾಕಾಬಂಧಿ ಹಾಕಲಾಗಿದೆ. ಸಧ್ಯ ತನಿಖೆ ಮುಂದುವರಿದಿದ್ದು, ಇದೊಂದು ಭಯೋತ್ಪಾದಕರ ಕೃತ್ಯವಿರಬಹುದು ಎಂದು ಶಂಕಿಸಲಾಗಿದೆ.

2019 ರ ಫೆಬ್ರವರಿಯಲ್ಲಿ ಪುಲ್ವಾಮಾ ಬಳಿಯ ಹೆದ್ದಾರಿಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಮಾರಣಹೋಮ ನಡೆಸಿದ್ದರು. ಹೀಗಾಗಿ ಕಣಿವೆಯ ರಸ್ತೆಗಳಲ್ಲಿ ಸಣ್ಣ ವಸ್ತು ಪತ್ತೆಯಾದರೂ ಭೀತಿಗೊಳಗಾಗುವಂತೆ ಮಾಡಿದೆ.

ಇಂದು ಬೆಳಗ್ಗೆ ಶ್ರೀನಗರಕ್ಕೆ 24 ರಾಷ್ಟ್ರಗಳ ವಿದೇಶಿ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿದ್ದು, ಸ್ಥಳೀಯರೊಂದಿಗೆ ಸಂವಾದ ನಡೆಸಿದೆ. ನಿಯೋಗ ಬುದ್ಗಾಂ ಜಿಲ್ಲೆಯ ಮಾಗಮ್‍ ಬ್ಲಾಕ್ ನಲ್ಲಿ ಸ್ಥಳೀಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿತು. ಪಂಜಾಯತ್‍ ರಾಜ್ ವ್ಯವಸ್ಥೆ ಹಾಗೂ ಕುಂದುಕೊರತೆಗಳನ್ನು ಅಧಿಕಾರಿಗಳಿಗೆ ತಿಳಿಸುವ ವ್ಯವಸ್ಥೆ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಲಾಯಿತು.  

Leave a Reply

Your email address will not be published. Required fields are marked *

You May Also Like

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ

ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡಲಿ: ರಾಹುಲ್ ಗಾಂಧಿ

ಮಹಾರಾಷ್ಟ್ರ ಪ್ರಾಕೃತಿಕ ವಿಪತ್ತಿನ ವಿರುದ್ಧ ಹೋರಾಡುತ್ತಿದೆ. ಮಹಾರಾಷ್ಟ್ರದ ದೇಶದ ದೊಡ್ಡ ಆಸ್ತಿ. ಇದು ವ್ಯವಹಾರದ ಕೇಂದ್ರ. ಆದ್ದರಿಂದ ಮಹಾರಾಷ್ಟ್ರ ರಾಜ್ಯವನ್ನು ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.