ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ರೈಲ್ ರೋಕೋ ಚಳುವಳಿಯನ್ನು ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.
ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಕಳಸಾ ಬಂಡೂರಿ ರೈತರ ಹೋರಾಟ ಸಮಿತಿ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮುಖಂಡು ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ರೈತರು ಅಕ್ಷರಶಃ ಈ ಕಾಯ್ದೆಯಿಂದ ನಲುಗಿ ಹೋಗಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಅನ್ಯಾಯ ಎಸುಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ರೈತರು 3 ತಿಂಗಳಿನಿAದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದು, ಪ್ರತಿಭಟನಾ ವೇಳೆ ಹಲವರು ಮೃತಪಟ್ಟಿದ್ದಾರೆ. ಆದರೆ, ಪ್ರಧಾನಮಂತ್ರಿ ಅವರು ಜಾನಮೌನ ವಹಿಸಿದ್ದು ಖಂಡನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆಯಲ್ಲಿ ರೈತರು ರೈಲು ನಿಲ್ದಾಣಕ್ಕೆ ನುಗ್ಗುವಂತಹ ಸಂದರ್ಭದಲ್ಲಿ ಪೊಲೀಸರು ತಡೆಯುವ ಪ್ರಯತ್ನ ಮಾಡಿದಾದರೂ, ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದ್ದು ಕಂಡುಬAದಿತು.
ರೈತ ಮುಖಂಡ ಸಿದ್ದಣ್ಣ ತೇಜಿ, ಬಾಬಾಜಾನ್ ಮುಧೋಳ, ಆನಂದ ದಲಬಂಜನ್, ಗೋಪಾಲ್ ಕುಲಕರ್ಣಿ, ಎಂ.ಎಚ್. ಮುಲ್ಲಾ, ರೇಣುಕಾ ಹೊಂಗಲ್ ಮುಂತಾದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ಗೋವಾದಿಂದ ಬಂದ ಕೂಲಿ ಕಾರ್ಮಿಕ: ಕೊರೊನಾ ಸೋಂಕಿನಿಂದ ಸಾವು!

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ…

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.