ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ರೈಲ್ ರೋಕೋ ಚಳುವಳಿಯನ್ನು ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.
ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಕಳಸಾ ಬಂಡೂರಿ ರೈತರ ಹೋರಾಟ ಸಮಿತಿ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮುಖಂಡು ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ರೈತರು ಅಕ್ಷರಶಃ ಈ ಕಾಯ್ದೆಯಿಂದ ನಲುಗಿ ಹೋಗಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಅನ್ಯಾಯ ಎಸುಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ರೈತರು 3 ತಿಂಗಳಿನಿAದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದು, ಪ್ರತಿಭಟನಾ ವೇಳೆ ಹಲವರು ಮೃತಪಟ್ಟಿದ್ದಾರೆ. ಆದರೆ, ಪ್ರಧಾನಮಂತ್ರಿ ಅವರು ಜಾನಮೌನ ವಹಿಸಿದ್ದು ಖಂಡನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆಯಲ್ಲಿ ರೈತರು ರೈಲು ನಿಲ್ದಾಣಕ್ಕೆ ನುಗ್ಗುವಂತಹ ಸಂದರ್ಭದಲ್ಲಿ ಪೊಲೀಸರು ತಡೆಯುವ ಪ್ರಯತ್ನ ಮಾಡಿದಾದರೂ, ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದ್ದು ಕಂಡುಬAದಿತು.
ರೈತ ಮುಖಂಡ ಸಿದ್ದಣ್ಣ ತೇಜಿ, ಬಾಬಾಜಾನ್ ಮುಧೋಳ, ಆನಂದ ದಲಬಂಜನ್, ಗೋಪಾಲ್ ಕುಲಕರ್ಣಿ, ಎಂ.ಎಚ್. ಮುಲ್ಲಾ, ರೇಣುಕಾ ಹೊಂಗಲ್ ಮುಂತಾದವರು ಪಾಲ್ಗೊಂಡಿದ್ದರು.