ಶಿರಹಟ್ಟಿ: ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದು, ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಅರವಿಂದ ಸರಾಫ್ ಹೇಳಿದರು.
ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಗುರುವಾರ ನಡೆದ ಹೈನುಗಾರಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ಹೈನುಗಾರಿಕೆಯಲ್ಲಿ ಇನ್ನು ಹೆಚ್ಚಿನ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವುದರ ಮೂಲಕ ಹಾಲು ಉತ್ಪಾದನೆಯಲ್ಲಿ ದ್ವಿಗುಣ ಸಾಧಿಸಬೇಕು. ಈ ಭಾಗದ ರೈತರು ಕೃಷಿಯೊಂದಿಗೆ ಹೈನುಗಾರಿಕೆ ಮಾಡುವುದರಿಂದ ಮೇವಿನ ಕೊರತೆ ಇರುವುದಿಲ್ಲ. ಹೆಚ್ಚಾಗಿ ಜೋಳ, ಶೇಂಗಾ ಬೆಳೆಯುವುದರಿಂದ ಹಸುಗಳಿಗೆ ಪೌಷ್ಟಿಕ ಆಹಾರ ದೊರೆಯುತ್ತಿದ್ದು, ಹೆಚ್ಚು ಹಾಲು ನೀಡುತ್ತವೆ ಎಂದು ಹೇಳಿದರು.
ರೈತರು ದೇಶಿಯ ತಳಿಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ದೇಶಿಯ ತಳಿಯ ಹಸುವಿನ ಹಾಲಿನಲ್ಲಿ ಂ-2 ಪ್ರೋಟೀನ್ ಇದ್ದು, ಇದರ ಸೇವನೆಯಿಂದ ಮನುಷ್ಯರ ಆರೋಗ್ಯ ವೃದ್ಧಿಸುತ್ತದೆ. ಅಲ್ಲದೆ ಹೃದಯಾಘಾತ, ಮಧುಮೇಹದಂತಹ ದೊಡ್ಡಕಾಯಿಲೆಗಳು ದೂರವಾಗುತ್ತವೆ. ಹೈನುಗಾರಿಕೆಯಲ್ಲಿ ತಾಂತ್ರಿಕತೆ ವೃದ್ಧಿಯಾಗಿದ್ದು, ಕೆಲವೇ ದಿನಗಳಲ್ಲಿ ಹಸುವಿನ ಗರ್ಭಧಾರಣೆಯಲ್ಲಿ ಹೆಣ್ಣುಕರು ಬೇಕೋ ಅಥವಾ ಗಂಡು ಕರು ಬೇಕೋ ಅದನ್ನೇ ಪಡೆದುಕೊಳ್ಳುವ ಅವಕಾಶವಿದೆ ಎಂದು ತಿಳೀಸಿದರು
ಜಿ.ಪಂ ಸದಸ್ಯ ಈಶಣ್ಣ ಹುಲ್ಲಲ್ಲಿ, ಪಶುವೈದ್ಯ ಎನ್.ಎ. ಹವಳದ, ಎಸ್.ಎಸ್. ಹೊಸಮಠ, ತಿಪ್ಪಣ್ಣ ತಳಕಲ್, ದಯಾನಂದ ಹಕ್ಕಾಪಕ್ಕಿ, ಸಿ.ಎಸ್. ಹೊಸಮನಿ, ಮಂಜುನಾಥ ಅಮರಾಪುರ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಒಮಿಕ್ರಾನ ಭಿತಿ ಇಂದಲ್ಲಾ ನಾಳೆಯಿಂದ ಶುರು..!

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುಣಾವಣೆಗೆ ಮತದಾನ ನಡೆಯುತ್ತಿದ್ದು, ನಗರದ 35 ವಾರ್ಡಗಳಲ್ಲಿ ನಡಿಯುತ್ತಿರುವ…

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ಸರಕಾರಿ ಹುದ್ದೆಗಳ ನೇಮಕಾತಿ: “ವಯೋಮಿತಿ ಪರಿಷ್ಕರಣೆಗೆ” ನಿರುದ್ಯೋಗಿಗಳ ಆಗ್ರಹ

ಉತ್ತರಪ್ರಭ ಸುದ್ದಿ ರಾಯಬಾಗ: “ರಾಜ್ಯ ಸರಕಾರ ಈಗ ಮೂರ್ನಾಲ್ಕು ವರುಷ ಕೋವಿಡ್ ವ್ಯಾಪಕವಾಗಿ ಹರಡಿ, ಲಾಕಡೊನ್…