ಲಕ್ಷ್ಮೇಶ್ವರ: ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬುಧವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಶ್ರೀರಾಮಸೇನೆಯ ಕಾರ್ಯಕರ್ತರು ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಮುಖಂಡರಾದ ಪ್ರಕಾಶ ಮಾದನೂರ, ಅರುಣ ಮೆಕ್ಕಿ ಮಾತನಾಡಿ, ‘ಪ್ರೀತಿ, ಪ್ರೇಮದ ಹೆಸರಲ್ಲಿ ಅನ್ಯಕೋಮಿನ ಯುವ ಕರು ಹಿಂದೂ ಯುವತಿಯರಿಗೆ ಮೋಸ ಮಾಡುತ್ತಿದ್ದಾರೆ. ಹಿಂದೂ ಯುವತಿಯರಿಗೆ ಆಸೆತೋರಿಸಿ ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಪಟ್ಟಣಕ್ಕೆ ಶಿಕ್ಷಣಕ್ಕಾಗಿ ಬರುವ ವಿದ್ಯಾರ್ಥಿನಿಯರಿಗೆ ಪ್ರೇಮದ ಬಲೆ ಬೀಸುತ್ತಿದ್ದಾರೆ ಎಂದರು.
ಇಲ್ಲಿ ಒಂದೇ ತಿಂಗಳಲ್ಲಿ ಎರಡು ಪ್ರಕರಣಗಳು ನಡೆದಿವೆ. ಅಧಿಕಾರಿಗಳು ಪ್ರಕರಣಗಳು ಮುಚ್ಚಿಟ್ಟಿದ್ದಾರೆ ಎಂದು ದೂರಿದರು. ಬಸವರಾಜ ಹೊಗೆಸೊಪ್ಪಿನ, ಫಕ್ಕೀರೇಶ ಕರ್ಜೆಕಣ್ಣವರ, ಮಂಜುನಾಥ ಪಾಟೀಲ, ನವೀನ ಹಿರೇಮಠ, ಮುತ್ತು ಕರ್ಜೆಕಣ್ಣವರ, ವಿನಾಯಕ ಬೆಳವಡಿ, ಲೋಕೇಶ ಸುತಾರ, ಶಂಕರಗೌಡ ಪಾಟೀಲ, ಅರುಣ ಪಾಟೀಲ, ಈರಣ್ಣ ಶಿಗ್ಲಿ, ಮಾಂತೇಶ ಅಣ್ಣಿಗೇರಿ ಇದ್ದರು.

Leave a Reply

Your email address will not be published. Required fields are marked *

You May Also Like

ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಹುಡುಗಿಯ ಭಯಾನಕ ಕತೆ!

ಕಳೆದ ನಾಲ್ಕು ವರ್ಷಗಳ ಹಿಂದೆ ನಾಗಾಲ್ಯಾಂಡ್‌ನಿಂದ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದವಳು ಬೆಂಗಳೂರಿಗೆ ಬಂದವಳು ಆಪ್ತರೊಂದಿಗೆ ಜೈಲು ಪಾಲಾಗಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆತ್ಮಹತ್ಯೆಗೆ ಶರಣು

ರಾಯಚೂರು : ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು…

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್: ಸಿಎಂಗೆ ಜೊಲ್ಲೆ ಅಭಿನಂದನೆ

ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.