ಲಕ್ಷ್ಮೇಶ್ವರ: ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬುಧವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಶ್ರೀರಾಮಸೇನೆಯ ಕಾರ್ಯಕರ್ತರು ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಮುಖಂಡರಾದ ಪ್ರಕಾಶ ಮಾದನೂರ, ಅರುಣ ಮೆಕ್ಕಿ ಮಾತನಾಡಿ, ‘ಪ್ರೀತಿ, ಪ್ರೇಮದ ಹೆಸರಲ್ಲಿ ಅನ್ಯಕೋಮಿನ ಯುವ ಕರು ಹಿಂದೂ ಯುವತಿಯರಿಗೆ ಮೋಸ ಮಾಡುತ್ತಿದ್ದಾರೆ. ಹಿಂದೂ ಯುವತಿಯರಿಗೆ ಆಸೆತೋರಿಸಿ ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಪಟ್ಟಣಕ್ಕೆ ಶಿಕ್ಷಣಕ್ಕಾಗಿ ಬರುವ ವಿದ್ಯಾರ್ಥಿನಿಯರಿಗೆ ಪ್ರೇಮದ ಬಲೆ ಬೀಸುತ್ತಿದ್ದಾರೆ ಎಂದರು.
ಇಲ್ಲಿ ಒಂದೇ ತಿಂಗಳಲ್ಲಿ ಎರಡು ಪ್ರಕರಣಗಳು ನಡೆದಿವೆ. ಅಧಿಕಾರಿಗಳು ಪ್ರಕರಣಗಳು ಮುಚ್ಚಿಟ್ಟಿದ್ದಾರೆ ಎಂದು ದೂರಿದರು. ಬಸವರಾಜ ಹೊಗೆಸೊಪ್ಪಿನ, ಫಕ್ಕೀರೇಶ ಕರ್ಜೆಕಣ್ಣವರ, ಮಂಜುನಾಥ ಪಾಟೀಲ, ನವೀನ ಹಿರೇಮಠ, ಮುತ್ತು ಕರ್ಜೆಕಣ್ಣವರ, ವಿನಾಯಕ ಬೆಳವಡಿ, ಲೋಕೇಶ ಸುತಾರ, ಶಂಕರಗೌಡ ಪಾಟೀಲ, ಅರುಣ ಪಾಟೀಲ, ಈರಣ್ಣ ಶಿಗ್ಲಿ, ಮಾಂತೇಶ ಅಣ್ಣಿಗೇರಿ ಇದ್ದರು.

Leave a Reply

Your email address will not be published. Required fields are marked *

You May Also Like

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್‌, ಬಾರ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಬಿಜೆಪಿ ಅಸ್ಪೃಶ್ಯತೆಯನ್ನು ಮರುಸ್ಥಾಪಿಸುತ್ತಿದೆ

ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ.

ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಪೊಲೀಸರು!

ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಕಟ್ಟಿಗೆ ಅಡ್ಡೆಗಳಿಂದ ಶಿರಹಟ್ಟಿ ಜನರಿಗೆ ಕೊರೊನಾ ಭಯ..!

ದಿನದಿಂದ ದಿನಕ್ಕೆ ನಿರೀಕ್ಷೆಗೂ ಮೀರಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾತ್ರ ಕಟ್ಟಿಗೆ ಅಡ್ಡೆಗಳು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ನಡೆಯುತ್ತಿವೆ.