ಗದಗ: ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ 30 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಸಮಾಜ ಬಾಂಧವರು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಜಿಲ್ಲೆಯ ಸಮುದಾಯದ ಜನರು ಪಾಲ್ಗೊಳ್ಳಲು ಈಗಾಗಲೇ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯಿಂದ 275 ಬಸ್, 25 ಕ್ರೂಸರ್, 10 ಕಾರು ವ್ಯವಸ್ಥೆ ಮಾಡಲಾಗಿದೆ. ಇನ್ನುಳಿದ ಜನರು ತಮ್ಮ ಸ್ವಂತ ವಾಹನದಲ್ಲಿ ಆಗಮಿಸುವ ಮೂಲಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪಂಚಮಸಾಲಿ ಸಮಾಜವನ್ನು 2ಎ ಮಿಸಲಾತಿಗೆ ಸೇರಿಸಬೇಕು ಎಂಬುದು 1994 ರಲ್ಲೆ ಆರಂಭವಾಗಿದೆ. ಆದರೆ, ಅಂದಿನಿಂದ ಈವರೆಗೂ ಸರ್ಕಾರ ಸಮುದಾಯಕ್ಕೆ ಸ್ಪಂದಿಸುವ ಕೆಲಸ ಮಾಡಿಲ್ಲ. ಪಂಚಮಸಾಲಿ ಸಮುದಾಯದ ಜನರು ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿದ್ದು, ಸಮುದಾಯಕ್ಕೆ 2ಎ ಮಿಸಲಾತಿ ಅವಶ್ಯವಿದೆ ಎಂದರು.

ಅನ್ನಿ ಪಾಟೀಲಗೌಡರ, ಮಲ್ಲಿಕಾರ್ಜುನ, ಸಿದ್ದಣ್ಣ ಪಲ್ಲೆದ, ಅಯ್ಯಪ್ಪ ಅಂಗಡಿ, ಎಸ್.ಕೆ ಚಿನ್ನೂರ, ಸಂಗಮೇಶ ಕವಳಕಾಯಿ, ಮಹೇಶ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…

ಕೊಪ್ಪಳ ಮೂಲದ ಮಸ್ಕಿ ಕೆನರಾ ಬ್ಯಾಂಕ್ ಉದ್ಯೋಗಿಗೂ ಕೊರೊನಾ..!

ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್…

ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ

ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..