ಮುಳಗುಂದ : ಪಟ್ಟಣ ಪಂಚಾಯ್ತಿ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕೋರಮ್ಮನ ಗುಡಿ ಹತ್ತಿರದ ಆಶ್ರಯ ಬಡಾವಣೆಯಲ್ಲಿ 16.10ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ,ಶಿದ್ದೇಶ್ವರ ನಗರದಲ್ಲಿ ಹಾಗೂ ಅಂಬೇಡ್ಕರ್ ನಗರದಲ್ಲಿ ಫೇವರಸ್ ಜೋಡಣೆ ಕಾಮಗಾರಿಗೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಹರಣಶೀಕಾರಿ ಕಾಲೂನಿ ಮಾದರಿ ಶೌಚಾಲಯ ಹಾಗೂ ಬಯಲು ಬಸವೇಶ್ವರ ನಗರದಲ್ಲಿನ ನಿಮರ್ಮಿಸಿದ ಸಾರ್ವಜನಿಕ ಸುಲಭ ಶೌಚಾಲಯಗಳನ್ನ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗದಗ ಎ.ಪಿ.ಎಂ.ಸಿ. ಅಧ್ಯಕ್ಷ ಸಿ.ಬಿ ಬಡ್ನಿ, ಪ.ಪಂ ಸದಸ್ಯರಾದ ಕೆ.ಎಲ್ ಕರಿಗೌಡರ, ಮಹಾದೇವಪ್ಪ ಗಡಾದ, ಮಾಂತಪ್ಪ ನೀಲಗುಂದ, ಎನ್.ಆರ್ ದೇಶಪಾಂಡೆ, ಷಣ್ಮುಖಪ್ಪ ಬಡ್ನಿ, ಬಸವರಾಜ ಹಾರೋಗೇರಿ, ಪಾರವ್ವ ಅಳಣ್ಣವರ, ನೀಲವ್ವ ಅಸುಂಡಿ, ಮಲ್ಲವ್ವ ಕುಂದಗೋಳ, ಬಸವರಾಜ ಹೊರಪೇಟಿ, ಶಂಭು ಚವ್ಹಾಣ, ಮಂಜುನಾಥ ಹಾಗೂ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.

ಉತ್ತರದಲ್ಲಿ ಇನ್ನೂ ನಿಂತಿಲ್ಲ ಪ್ರವಾಹ ಭೀತಿ!

ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದ್ದರೂ ಪ್ರವಾಹ ಭೀತಿ ಇನ್ನೂ ಕಡಿಮೆಯಾಗಿಲ್ಲ.

ಶಾಸಕ ಬಂಡಿ ಅವರಿಗೆ ಎಸ್‌ಎಫ್‌ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ

ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಮೂವರು ಕೋವಿಡ್ ಗೆ ಬಲಿ..! : ಕೊಣ್ಣೂರು ಗ್ರಾಮದಲ್ಲಿ ಆತಂಕ..!

ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ.