ಸ್ಮಶಾನದಲ್ಲಿ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ
ಚಾಲನೆ ನೀಡಿದರು.
ಮೂಢನಂಬಿಕೆಯ ವಿರುದ್ಧ ಜಾಗೃತಿಯ ಸಂಕೇತವಾಗಿ ನೂತನ ಕಾರಿಗೆ ಸ್ಮಶಾನದಲ್ಲಿ ಚಾಲನೆ ನೀಡಲಾಯಿತು ಎಂದರು.

ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮೂಢನಂಬಿಕೆಯ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸುತ್ತಿದ್ದೇವೆ. ಅದೇ ರೀತಿ ಕಾರಿಗೆ ಚಾಲನೆ ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆಗೆ ಪ್ರಯತ್ನ ಪಡಲಾಗುತ್ತಿದೆ.

-ವಿಕ್ರಂ, ಕಾರ್ ಮಾಲಿಕ

ಈ ಹಿಂದೆ ಸ್ಮಶಾನದಲ್ಲಿ ನನ್ನ ಕಾರಿಗೆ ಚಾಲನೆ ನೀಡಲಾಗಿತ್ತು. ಇದರಿಂದ ಪ್ರೇರಣೆಗೊಂಡು ಸಂಕೇಶ್ವರದ ವಿಕ್ರಂ ಅವರ ನೂತನ ಕಾರಿಗೆ ರುದ್ರಭೂಮಿಯಲ್ಲಿ ಚಾಲನೆ ನೀಡಿದ್ದೇನೆ. ಈ ಬಗ್ಗೆ ಜಾಗೃತಿ ಹಾಗು ಬದಲಾವಣೆ ಹಂತ-ಹಂತವಾಗಿ ಆಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Exit mobile version