ಮುಳಗುಂದ: ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷವಾಕ್ಯದೊಂದಿಗೆ ಮೊದಲ ಗ್ರಾಮವಾಸ್ತವ್ಯವನ್ನ ಗದಗ ಉಪವಿಭಾಗಧಿಕಾರಿ ರಾಯಪ್ಪ ಹುಣಸಿಗಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕಿನ ಅಂತೂರ ಬೆಂತೂರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಆರಂಭವಾಯಿತು.
ನಂತರ ಮಾತನಾಡಿದ ಅವರು ರೈತರ ಪಹಣಿಯಲ್ಲಿನ ದೋಷ, ಪೌತಿ ಸರಿಪಡಿಸಲು ಕ್ರಮ ವಹಿಸುವುದು. ಪಿಂಚಣಿ ಸೌಲಭ್ಯವನ್ನ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಅರ್ಜಿ ಸ್ವೀಕರಿಸಿ ಆದೇಶ ನೀಡುವುದು. ಗ್ರಾಮದಲ್ಲಿ ಸ್ಮಶಾನ ಲಭ್ಯತೆ ಪರೀಶಿಲನೆ ಮತ್ತು ಅಭಿವೃದ್ದಿಗೆ ಚಿಂತನೆ, ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಕಾಯ್ದಿರಿಸುವುದು. ಸರ್ಕಾರದ ಸೌಳಭ್ಯಗಳ ಕುರಿತು ಜಾಗೃತಿ ಮೂಡಿಸುದು ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸೌಲಭ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನ ಸ್ವೀಕರಿಸಿ ಸಾಧ್ಯವಿದ್ದಷ್ಟು ಸ್ಥಳದಲ್ಲೇ ಪರಿಹಾರ ಇಲ್ಲವೇ ನಿಗಧಿತ ಅವಧಿಯಲ್ಲಿ ಅರ್ಜಿ ವಿಲೇಯಾರಿಗೆ ಸೂಚನೆ ನೀಡಲಾಗುವದು. ಎಂದು ತಿಳಿಸಿದರು.
ನಂತರ ಗ್ರಾಮಸ್ಥರ ದೂರು ಆಲಿಸಿದ ಅವರು ಊರ ಕೆರೆಯ ಅಂತರ್ಜಲ ಹೆಚ್ಚಳದಿಂದ ಮನೆಯಲ್ಲಿ ನೀರು ಜೀನುಗಿ ಹಾನಿಯಾಗುತ್ತಿರುವ, ಅತಿವೃಷ್ಟಿಯಿಂದ ಹಾಳದ ಮನೆಗಳು, ಶಿಥಿಲಗೊಂಡ ಅಂಗನವಾಡಿ ಕಟ್ಟಡ, ರಸ್ತೆ ಮೇಲೆ ಚರಂಡಿ ನೀರು, ರೈತರ ಹೊಲಗಳಿಗೆ ರಸ್ತೆ ಸಂಕರ್ಪ ಸೇರಿದಂತೆ ಗ್ರಾಮದಲ್ಲಿನ ಕುಂದು ಕೊರತೆಗಳ ಸ್ಥಳಕ್ಕೆ ಭೇಟಿ ನೀಡಿ ಮದ್ಯಾಹ್ನದ ವರೆಗೂ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯ್ತಿ ಇಒ ಎಚ್‌.ಎಸ್.ಜಿನಗಾ,ಕಂದಾಯ ನಿರೀಕ್ಷಕ ಎಸ್‌.ಎಸ್. ಪಾಟೀಲ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಎಂ.ಹೆಬ್ಬಳ್ಳಿ, ತಾಕೂಕ ಆರೋಗ್ಯ ಇಲಾಖೆ ಅಧಿಕಾರಿ ಎಸ್.ಎಸ್.ನೀಲಗುಂದ, ಪಶು ಇಲಾಖೆ ಅಧಿಕಾರಿ ಡಾ.ತಿಪ್ಪಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಕಾರಿ ಲಲಿತಾ ಅಳವಂಡಿ, ಲೋಕೋಪಯೋಗಿ ಇಲಾಖೆ ಎಂಜನೀಯರ ದೇವರಾಜ್ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಭಾಗಹಿಸಿದ್ದರು. ಗ್ರಾ.ಪಂ ಅಧ್ಯಕ್ಷೆ ಯಲ್ಲವ್ವ ಹೊಸಮನಿ,ಉದ್ಯಕ್ಕೆ ನಿರ್ಮಲಾ ಹಸರಾಣಿ, ಗ್ರಾ.ಪಂ ಪಿಡಿಒ ಚೆಟ್ರಿ,ಗ್ರಾ.ಪಂ ಸದಸ್ಯರು ಸೇರಿದಂತೆ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಎಚ್.ಎಸ್.ವೆಂಕಟಾಪೂರದ ನೀರಿನ ಬವಣೆ ನೀಗುವುದು ಯಾವಾಗ..?

ಅದು ಆ ತಾಲೂಕಿನ ಕಟ್ಟಕಡೆಯ ಗ್ರಾಮ. ಆ ತಾಲೂಕಿನಲ್ಲಿ ಆ ಗ್ರಾಮ ಇದ್ರೂ ವಿಧಾನ ಸಭಾ ಕ್ಷೇತ್ರ ಮಾತ್ರ ಬೇರೆಯದೆ. ಎಲ್ಲಿಯ ತಾಲೂಕು, ಎಲ್ಲಿಯ ವಿಧಾನಸಭಾ ಕ್ಷೇತ್ರ, ಎಲ್ಲಿಯ ಆ ಗ್ರಾಮ ಎನ್ನುವಂತಾಗಿದೆ.

ನಮ್ಮ ಕರವೇ ಗ್ರಾಮ ಘಟಕ ಉದ್ಘಾಟನೆ

ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ‌ ಕರವೇ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.

ಇಂದು ಮೂರನೇ ಹಂತದ ಲಾಕ್ ಡೌನ್ ಅಂತ್ಯ – ನಾಳೆಯಿಂದ ಹೇಗಿರಲಿದೆ ರಾಜ್ಯ?

ಇಂದು ಮೂರನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದೆ. ನಾಳೆಯಿಂದ ಹೊಸ ಸ್ವರೂಪದಲ್ಲಿ ಲಾಕ್ಡೌನ್ ಜಾರಿಯಾಗಲಿದೆ.