ನರೇಗಲ್: ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಜನಪದ ಸಾಹಿತ್ಯದಲ್ಲಿ ತಮ್ಮದೇಯಾದ ವಿನೂತ ಶೈಲಿಯ ಹಾಸ್ಯದ ಮೂಲಕ ಪಾಗದ ಮನೆಮಾತಾಗಿದ್ದರು. ಮಿಮಿಕ್ರಿಯೆ, ವಿವಿಧ ಜನಾಂಗದ ವೇಷ ಭೂಷಣಗಳೂಂದಿಗೆ ಅಭಿನಯಿಸಿ ಜನಪದ ಸಾರವನ್ನು ಜನರಿಗೆ ತಲುಪಿಸಿದ ಕೀರ್ತಿ ಬಸವರಾಜ ಪಾಗದ ಅವರಿಗೆ ಸಲ್ಲುತ್ತದೆ‌.
ಪ್ರಸ್ತುತ ದಿನಮಾನದಲ್ಲಿ ಜಾನಪದ ಕಲೆಗೆ ತನ್ನದೇಯಾದ ಕೊಡುಗೆ ನೀಡುತ್ತಿರುವ ಕೊತಬಾಳ ಗ್ರಾಮದಲ್ಲಿ ಹಿರಿಯ ಜಾನಪದ ಕಲಾವಿದ ಶಂಕ್ರಣ್ಣ ಸಂಕಣ್ಣವರ್ ಅವರೊಂದಿಗೆ ಇಪ್ಟಾ, ಅರುಣೋದಯ ಕಲಾ ತಂಡಗಳ ಮೂಲಕ ಜಾನಪದ ಕ್ಷೇತ್ರಕ್ಕೆ ತಮ್ಮನ್ನು ಪರಿಚಯಿಸಿಕೊಂಡ ಪಾಗದ ನಿಧನ ಜಾನಪದ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು, ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ-2021 ಮತಗಟ್ಟೆಗಳ ಬದಲಾವಣೆ ಮಾಡಿದ ಮಾಹಿತಿ

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ನೇದ್ದಕ್ಕೆ ಸಂಬOಧಿಸಿದ ಬೆಟಗೇರಿಯಲ್ಲಿನ ಈ ಕೆಳಗಿನ ಮತಗಟ್ಟೆಗಳನ್ನು ಬದಲಾವಣೆ…

ಲಕ್ಷ್ಮೇಶ್ವರ: ಅಪರಾಧ ತಡೆ ಮಾಸಾಚರಣೆ

ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ರಾಜ್ಯದಲ್ಲಿ ಸಿಎಮ್ ಬದಲಾವಣೆಗೆ ಪ್ರಯತ್ನ ನಡೆದಿಲ್ಲಾ: ಸಚಿವ ಶಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಶೀಘ್ರವೇ ಅಂಗನವಾಡಿ ಬಾಗಿಲು ತೆರೆಯಲು ಸರ್ಕಾರ ನಿರ್ಧಾರ

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.