ನರೇಗಲ್: ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಜನಪದ ಸಾಹಿತ್ಯದಲ್ಲಿ ತಮ್ಮದೇಯಾದ ವಿನೂತ ಶೈಲಿಯ ಹಾಸ್ಯದ ಮೂಲಕ ಪಾಗದ ಮನೆಮಾತಾಗಿದ್ದರು. ಮಿಮಿಕ್ರಿಯೆ, ವಿವಿಧ ಜನಾಂಗದ ವೇಷ ಭೂಷಣಗಳೂಂದಿಗೆ ಅಭಿನಯಿಸಿ ಜನಪದ ಸಾರವನ್ನು ಜನರಿಗೆ ತಲುಪಿಸಿದ ಕೀರ್ತಿ ಬಸವರಾಜ ಪಾಗದ ಅವರಿಗೆ ಸಲ್ಲುತ್ತದೆ‌.
ಪ್ರಸ್ತುತ ದಿನಮಾನದಲ್ಲಿ ಜಾನಪದ ಕಲೆಗೆ ತನ್ನದೇಯಾದ ಕೊಡುಗೆ ನೀಡುತ್ತಿರುವ ಕೊತಬಾಳ ಗ್ರಾಮದಲ್ಲಿ ಹಿರಿಯ ಜಾನಪದ ಕಲಾವಿದ ಶಂಕ್ರಣ್ಣ ಸಂಕಣ್ಣವರ್ ಅವರೊಂದಿಗೆ ಇಪ್ಟಾ, ಅರುಣೋದಯ ಕಲಾ ತಂಡಗಳ ಮೂಲಕ ಜಾನಪದ ಕ್ಷೇತ್ರಕ್ಕೆ ತಮ್ಮನ್ನು ಪರಿಚಯಿಸಿಕೊಂಡ ಪಾಗದ ನಿಧನ ಜಾನಪದ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು, ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಕ ಸಾ ಪ ಚುಣಾವಣೆಯ ವಿವರ : ಅಧ್ಯಕ್ಷರಾಗಿ ವಿವೇಕಾನಂದಗೌಡ ಪಾಟೀಲ

ಈ ಚುಣಾವಣಾ ಸ್ಪರ್ಧೆಯಲ್ಲಿ ಇದೆ ಮೊದಲ ಬಾರಿಗೆ ಒಟ್ಟು 2231 ಮತಗಳನ್ನು ಪಡೆಯುವದರ ಮುಲಕ ಗದಗ ಜಿಲ್ಲೆಯ ನರಗುಂದ, ನರೇಗಲ್ , ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ, ಮುಂಡರಗಿಯಲ್ಲಿ ಕೊನೆಯ ಹಂತದವರೆಗೂ ಮುನ್ನಡೆ ಕಾಯ್ದುಕೊಂಡಿದ್ದ  ವಿವೇಕಾನಂದಗೌಡ  ಪಾಟೀಲರು, ಹೊಳೆಆಲೂರ, ಶಿರಹಟ್ಟಿಯಲ್ಲಿ ಅಲ್ಪ ಹಿನ್ನಡೆ ಅನುಭವಿಸಿ, ಕ ಸಾ ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ

ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು  ವಿಧಿವಿಜ್ಞಾನ  ಪ್ರಯೋಗಾಲಯ ವಿಭಾಗದಲ್ಲಿ  84…

ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ: ಡಿಸಿಎಂ ಕಾರಜೋಳ

ಗದಗ: ಪೂರ್ಣಾವಧಿಗೆ ಬಿ.ಎಸ್.ಯಡಿಯೂರಪ್ಪ ಅವ್ರೇ ಸಿಎಂ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಡಿಸಿಎಂ…