ದೆಹಲಿ: ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಭಾರೀ ಇಳಿಕೆಯಾಗಿದ್ದು, ಚಿನ್ನ ಕೊಳ್ಳುವವರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,180 ರೂ. ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 43,250 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, ನಿನ್ನೆ 67 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 69 ಸಾವಿರಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 2 ದಿನಗಳ ಹಿಂದೆ 46,400 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 45,130 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 46,130 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,180 ರೂ. ಆಗಿದೆ. ಹಾಗೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 43,250 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 49,000 ರೂ. ದಾಟಿದೆ.

ಬೆಳ್ಳೆ ಬೆಲೆ ಏರಿಕೆ:

ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 67 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 69,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 68,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,000 ರೂ. ದಾಟಿದೆ.

ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

Leave a Reply

Your email address will not be published. Required fields are marked *

You May Also Like

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ. 

ಉಗ್ರರಿಗೆ ಚಿಕಿತ್ಸೆ ನೀಡಲು, ಶಸ್ತ್ರಾಸ್ತ್ರ ಪೂರೈಸುವುದಕ್ಕಾಗಿಯೇ ಈತ ಮಾಡಿದ್ದೇನು?

ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಸುಪ್ರೀಂಕೋರ್ಟ್ ಆದೇಶ: ಅನಂತ ಪದ್ಮನಾಭ ದೇವಸ್ಥಾನ ಆಡಳಿತ ರಾಜಮನೆತನದ ಹಕ್ಕು

ಈ ಐತಿಹಾಸಿಕ ದೇವಸ್ಥಾನದ ಆಡಳಿತದ ಮೇಲೆ ಹಿಡಿತ ಸಾಧಿಸಲು ಟ್ರಸ್ಟ್ ಒಂದನ್ನು ಸ್ಥಾಪಿಸುವಂತೆ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶ ರದ್ದು.