ದೆಹಲಿ: ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಭಾರೀ ಇಳಿಕೆಯಾಗಿದ್ದು, ಚಿನ್ನ ಕೊಳ್ಳುವವರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,180 ರೂ. ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 43,250 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, ನಿನ್ನೆ 67 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 69 ಸಾವಿರಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 2 ದಿನಗಳ ಹಿಂದೆ 46,400 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 45,130 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 46,130 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,180 ರೂ. ಆಗಿದೆ. ಹಾಗೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 43,250 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 49,000 ರೂ. ದಾಟಿದೆ.

ಬೆಳ್ಳೆ ಬೆಲೆ ಏರಿಕೆ:

ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 67 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 69,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 68,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,000 ರೂ. ದಾಟಿದೆ.

ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..?

ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,…

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು!

ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ.

ರಾಜ್ಯಸಭೆ ಕಲಾಪಕ್ಕೆ ಸರಕಾರವೇ ಹೊಣೆ: ಮಲ್ಲಿಕಾರ್ಜುನ ಖರ್ಗೆ

“ನಮ್ಮ ಧ್ವನಿಯನ್ನು ಹತ್ತಿಕ್ಕಲು ನಾವು ಬಿಡುವುದಿಲ್ಲ. ಇದಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಮತ್ತು ನಾವು ಮೋದಿಜಿ ಯವರ ಯಾವುದೇ ಸರ್ವಾಧಿಕಾರಕ್ಕೆ ಅವಕಾಶ ನೀಡುವುದಿಲ್ಲ.”

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.