ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಕಳೆದ ವಾರವಷ್ಟೇ ಗಾಲಿ ಜನಾರ್ಧನರೆಡ್ಡಿ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಈಗ ಅದು ಒಂದೇ ವಾರದಲ್ಲಿ 1.1 ಮಿಲಿಯನ್ ವೀಕ್ಷಕರು ವೀಕ್ಷಣೆ ಮಾಡುವ ಮೂಲಕ ನಮ್ಮ ಚಿತ್ರ ತಂಡಕ್ಕೆ ಎಲ್ಲಿಲ್ಲದ ಉತ್ಸಾಹ ತುಂಬಿದ್ದಾರೆ ಎಂದು ಚಿತ್ರದ ನಿರ್ದೇಶಕ ಕಿನ್ನಾಳರಾಜು ತಿಳಿಸಿದ್ದಾರೆ. ವಿಶೇಷವಾಗಿ ಈ ಟೀಸರ್ ಗೆ ಕೆ ಜಿ ಎಫ್ ಖ್ಯಾತಿಯ ಗರುಡ ರಾಮ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಸಮಾರಂಭದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಮತ್ತು ಗರುಡ ರಾಮ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರ ಏಪ್ರಿಲ್ ೯ ರ ಯುಗಾದಿ ಹಬ್ಬದ ಕೊಡುಗೆಯಾಗಿ ಬಿಡುಗಡೆ ಆಗಲಿದೆ ಎಂದು ಚಿತ್ರ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದರು.

            ಚಿತ್ರದಲ್ಲಿ ನಾಯಕನಾಗಿ ಲೋಹಿತ್, ನಾಯಕಿಯಾಗಿ ಸಸ್ಯ, ಬಲ ರಾಜವಾಡಿ, ವೈಭವ, ನಾಗರಾಜ್, ವಿಜಯ ಚಂಡೂರ್, ವರ್ಧನ್, ವೇದಾ ಹಾಸನ, ಶಶಿಕುಮಾರ ಮೊದಲಾದವರು ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಕನ್ನಡ ಕೋಗಿಲೆ ಖ್ಯಾತಿ ಅರ್ಜುನ್ ಇಟಗಿ ಮೊದಲಬಾರಿಗೆ ತೆರೆಗೆ ಬರುತ್ತಿದ್ದಾರೆ.

          ಛಾಯಾಗ್ರಹಣ ಜಿ.ವಿ.ನಾಗರಾಜ್ ಕಿನ್ನಾಳ, ಸಂಕಲನ ಗಣೇಶ್ ತೋರಗಲ್, ಸಾಹಸ ಚಂದ್ರು ಬಂಡೆ, ನೃತ್ಯ ಅರುಣ್ ರೈ, ಪಿಆರ್‌ಓ ಆರ್.ಚಂದ್ರಶೇಖರ, ಪ್ರಚಾರಕಲೆ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಕಥೆ-ಚಿತ್ರಕಥೆ-ಸಂಭಾಷಣೆ ಜೊತೆಗೆ ನಿರ್ದೇಶನವನ್ನು ಕಿನ್ನಾಳರಾಜು ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರು ಪರ್ವೇಶ್ ಸಿಂಗ್, ಮಮತಾ ಲೋಹಿತ್ ನಿರ್ಮಾಪಕರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 2496 ಪಾಸಿಟಿವ್, ಸಾವಿನ ಸಂಖ್ಯೆಯಲ್ಲೂ ಏರಿಕೆ: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 2496 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44077 ಕ್ಕೆ ಏರಿಕೆಯಾದಂತಾಗಿದೆ.

ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.