ನವದೆಹಲಿ: ದೇಶದಲ್ಲಿ ರೂಪಾಂತರಿ ಕೊರೊನಾ ಸೋಂಕು ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಏಮ್ಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಭಾರತದಾದ್ಯಂತ 240 ಹೊಸ ವೈರಸ್ಗಳು ಹರಡಿವೆ. ಕಳೆದ ವಾರದಿಂದ ರಾಜ್ಯದಲ್ಲಿ ಹೊಸದಾಗಿ ಸೋಂಕು ಉತ್ಪತ್ತಿಯಾಗುತ್ತಿದೆ.ಕೇವಲ ಮಹಾರಾಷ್ಟ್ರ ಮಾತ್ರವಲ್ಲದೆ ಕೇರಳ,ಮಧ್ಯಪ್ರದೇಶ,ಪಂಜಾಬ್, ಛತ್ತೀಸ್ಗಢದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಕಂಡು ಬಂದಿರುವ ಹೊಸ ರೂಪಾಂತರಿ ಕೊರೊನಾ ಸೋಂಕು ಹೆಚ್ಚು ಸಾಂಕ್ರಾಮಿಕವಾಗಬಲ್ಲದು. ಇದು ಹೆಚ್ಚು ಬೇಗ ಹರಡುತ್ತದೆ ಮತ್ತು ಅಪಾಯಕಾರಿಯಾಗಿದೆ. ಹಾಗೆಯೇ ಇದು ಮರು ಸೋಂಕಿಗೂ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ.

ಕೊರೊನಾ ಲಸಿಕೆಯನ್ನು ಮೊದಲ ಹಂತದಲ್ಲಿ ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಭಾರತದಲ್ಲಿ ಮತ್ತೆ ಮೊದಲಿನಂತೆ ಪರೀಕ್ಷೆಗಳು ನಡೆಯಬೇಕು, ಕಾಂಟ್ಯಾಕ್ಟ್ ಟ್ರೇಸಿಂಗ್, ಚಿಕಿತ್ಸೆಯಂತಹ ಕಾರ್ಯಗಳು ನಡೆಯಬೇಕು. ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ಸೂಚಿಸಿದೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ…

ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದ ಉಭಯ ದೇಶಗಳು!

ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ…

ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.