ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರ ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬೆಲೆ ಏರಿಕೆಯ ಬೇಸರದ ಸಂಗತಿಗೆ ಬೆಲೆ ಇಳಿಕೆ ಮಾಡುವುದೇ ಇದಕ್ಕೆ ಪರಿಹಾರವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ಟಿ ವ್ಯಾಪ್ತಿಗೆ ತಂದರೆ ಒಂದೇ ತೆರಿಗೆ ದರ ಅನ್ವಯವಾಗುತ್ತದೆ. ಇದರಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಆಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜಿಎಸ್ಟಿ ಮಂಡಳಿ ಸಮಾಲೋಚನೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಿಸುತ್ತವೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಪೆಟ್ರೋಲ್, ಡೀಸೆಲ್ ಅಡುಗೆ ಅನಿಲವನ್ನು ಗ್ರಾಹಕರಿಗೆ ಯೋಗ್ಯ ಬೆಲೆಯಲ್ಲಿ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮಕೈಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂಧನ ಬೆಲೆಯಿಂದ ಜನಸಾಮಾನ್ಯರು ಪರಿತಪಿಸುವಂತಾಗಿದ್ದು ಈ ಮದ್ಯೆ ಸಚಿವೆ ನಿರ್ಮಲಾ ಸೀರಾರಾಮನ್ ಹೇಳಿಕೆಗೆ ಹೆಚ್ಚು ಮಹತ್ವ ಬಂದಿದೆ.

Leave a Reply

Your email address will not be published. Required fields are marked *

You May Also Like

ನೌಕರರಿಗೆ ಶಾಕಿಂಗ್ ನ್ಯೂಸ್: ದಕ್ಷತೆ ಆಧರಿಸಿ ವೇತನ ಕಡಿತ

ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಹುಡುಗಿ :ಟಿವಿ ಶೋ ಮಾಡುತ್ತಲೇ ಶೇ.74 ಸ್ಕೋರ್

ಸದ್ಯ ಜನಪ್ರಿಯವಾಗಿರುವ ಅಲಾದ್ದೀನ್ ಫ್ಯಾಂಟಸಿ ಟಿವಿ ಶೋನಲ್ಲಿ ಪಾತ್ರ ಮಾಡುತ್ತಿರುವ ಈ ಹುಡುಗಿ ಶೂಟಿಂಗ್ ಮತ್ತು ಸ್ಟಡಿ ನಡುವೆ ಬ್ಯಾಲೆನ್ಸ್ ಮಾಡುತ್ತ ಗೆಲ್ಲುತ್ತಿದ್ದಾಳೆ.

ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ!

ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ…

ಒಂದು ವರ್ಷದವರೆಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಉಲ್ಲಂಘನೆಗೆ 10 ಸಾವಿರ ದಂಡ

ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ…