ಗದಗ: ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ  ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯನ್ನು ಮಾರ್ಚ ತಿಂಗಳಲ್ಲಿ ನಡೆಸಲಾಗುವುದು.   ತರಬೇತಿಯಲ್ಲಿ ಬ್ಯೂಟಿಷಿಯನ್ ಹಾಗೂ ಕಾಸ್ಮಟಾಲಜಿ , ಸ್ವಂತ ಉದ್ಯಮ ಸ್ಥಾಪನೆಗೆ ಸಹಾಯ ಮಾಡುವ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ  , ಹಣಕಾಸಿನ ಸಾಕ್ಷರತೆ, ಸಂಭವನೀಯ ವ್ಯವಹಾರದ ಕಲ್ಪನೆಗಳು ಮತ್ತು ಮೌಲ್ಯಮಾಪನ , ಸ್ಥಳೀಯ ಸಂಪನ್ಮೂಲಗಳ ಬಳಕೆ , ಯೋಜನಾ ವರದಿ ತಯಾರಿಕೆ , ಜಾಹೀರಾತು ಮತ್ತು ಮಾರುಕಟ್ಟೆ ಬಗಗೆ ಮಾಹಿತಿ, ಯಶಸ್ವಿ ಉದ್ಯಮಿಗಳ ಜೊತ ಸಂವಾದ, ವ್ಯವಹಾರದ ನೊಂದಣಿ  ಮಾಡುವ ವಿಧಾನಗಳು , ಬ್ಯಾಂಕ್ ವ್ಯವಹಾರದ ಮಾಹಿತಿ  ಉದ್ಯಮದ ಆಯ್ಕೆ ಬಗ್ಗೆ ಮಾಹಿತಿ  ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ಹಾಗೂ ತರಬೇತಿಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.   ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ 7795855847, 8722759959  ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ದ ಜಂಟಿ ನಿರ್ದೇಶಕ ಸಿ.ಎಚ್. ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಆದ್ಯತೆ ನೀಡಿ- ಗಜಾನನ ಮನ್ನಿಕೇರಿ

ನಿಡಗುಂದಿ: ಕೋವಿಡ್ ಲಾಕ್ ಡೌನ್ ನಂತರ ಭೌತಿಕ ತರಗತಿಯ ಬಳಿಕ ಎಸ್ ಎಸ್ ಎಲ್ ಸಿ…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.