ಹೊಸದಿಲ್ಲಿ: ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ವಿಚಾರಣೆ ನಡೆಸಿ, ನ್ಯಾಯಾಲಯ ಮತ್ತೆ ಏ.4ಕ್ಕೆ ವಿಚಾರಣೆ ಮುಂದೂಡಿತು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲುಸ್ತುವಾರಿ ಸಮಿತಿ ರಚನೆ ಬೇಡ ಎಂದು ಸುಪ್ರೀಂಕೋರ್ಟ್ ಮನವರಿಕೆ ಮಾಡುವಲ್ಲಿ ಕರ್ನಾಟಕ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.