ನವದೆಹಲಿ: ಹೊಸ ರೂಪಾಂತರಿ ಕೊರೊನಾ ತಳಿ ಅಪಾಯಕಾರಿಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಐದು ರಾಜ್ಯಗಳಲ್ಲಿ ಕೊರೊನಾ ಸಾಂಕ್ರಾಮಿಕ ಪ್ರಕರಣಗಳು ದಿಢೀರ್ ಹೆಚ್ಚಳಗೊಳ್ಳುತ್ತಿದ್ದು, ಹೊಸ ರೂಪಾಂತರಿ ಕೊರೊನಾ ತಳಿ, ಪ್ರತಿಕಾಯ ಅಭಿವೃದ್ಧಿಗೊಂಡ ಜನರಲ್ಲಿ ಮತ್ತೆ ಸೋಂಕು ಉಂಟುಮಾಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಛತ್ತೀಸ್ ಗಢ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಹೆಚ್ಚಳಗೊಳ್ಳುತ್ತಿರುವುದಕ್ಕೆ ಎಂದು ಡಾ.ಗುಲೇರಿಯಾ ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ತಳಿಯ ಕೊರೋನಾ ವೈರಸ್, ಪ್ರತಿಕಾಯಗಳನ್ನೂ ಮೀರಿ ಸೋಂಕು ಉಂಟುಮಾಡುವ ಸಾಮರ್ಥ್ಯ ಹೊಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.

ಪುದುಚೇರಿಯಲ್ಲಿ ನಾರಾಯಣ ಸ್ವಾಮಿ ಸರ್ಕಾರ ಪತನ!

ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.