ನವದೆಹಲಿ: ಹೊಸ ರೂಪಾಂತರಿ ಕೊರೊನಾ ತಳಿ ಅಪಾಯಕಾರಿಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಐದು ರಾಜ್ಯಗಳಲ್ಲಿ ಕೊರೊನಾ ಸಾಂಕ್ರಾಮಿಕ ಪ್ರಕರಣಗಳು ದಿಢೀರ್ ಹೆಚ್ಚಳಗೊಳ್ಳುತ್ತಿದ್ದು, ಹೊಸ ರೂಪಾಂತರಿ ಕೊರೊನಾ ತಳಿ, ಪ್ರತಿಕಾಯ ಅಭಿವೃದ್ಧಿಗೊಂಡ ಜನರಲ್ಲಿ ಮತ್ತೆ ಸೋಂಕು ಉಂಟುಮಾಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಛತ್ತೀಸ್ ಗಢ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಹೆಚ್ಚಳಗೊಳ್ಳುತ್ತಿರುವುದಕ್ಕೆ ಎಂದು ಡಾ.ಗುಲೇರಿಯಾ ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ತಳಿಯ ಕೊರೋನಾ ವೈರಸ್, ಪ್ರತಿಕಾಯಗಳನ್ನೂ ಮೀರಿ ಸೋಂಕು ಉಂಟುಮಾಡುವ ಸಾಮರ್ಥ್ಯ ಹೊಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಲೂಟಿ – ಆಮ್ ಆದ್ಮಿ!

ಬೆಂಗಳೂರು : ಕೊರೊನಾ ಹೆಸರಿನಲ್ಲಿ ರೂ. 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣದಲ್ಲಿ ಬಿಜೆಪಿ ಸರ್ಕಾರ ಭಾಗಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ನಟಿಗೆ ಸಹಾಯ ಮಾಡಿದ ಮೇಕಪ್ ಮ್ಯಾನ್!

ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…

ದೇಹ ಮಾರುವುದಕ್ಕಾಗಿ ಕರೆ ತಂದಿದ್ದ ಅಪ್ರಾಪ್ತೆಯರನ್ನು ರಕ್ಷಿಸಿದ ಪೊಲೀಸರು!

ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ.