ಕಾರಟಗಿ: ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.

ಪರಿಷತ್‌ನ ಜಿಲ್ಲಾಧ್ಯಕ್ಷ ರಾಜಶೇಖರ್ ಅಂಗಡಿ ಮತ್ತು ತಾಲೂಕಾ ಪರಿಷತ್ ಅಧ್ಯಕ್ಷ ಚನ್ನ ಬಸಪ್ಪ ವಕ್ಕಳದ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಸಮ್ಮೇಳನ ಅಧ್ಯಕ್ಷರ ಆಯ್ಕೆ, ಸ್ಥಳ, ದಿನಾಂಕ ನಿಗದಿಗೆ ಸಭೆ ನಡೆಯಿತು.

ತಾಲೂಕಾಧ್ಯಕ್ಷ ವಕ್ಕಳದ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಣ, ಸಾಹಿತ್ಯ ಕ್ಷೇತ್ರಗಳಲ್ಲದೆ ಜೀವನ ಶೈಲಿ ತರಬೇತುದಾರರಾಗಿ ದೇಶ ವಿದೇಶಗಳಲ್ಲಿ ಚಿರಪರಿಚಿತರಾಗಿದ್ದಾರೆ ಎನ್ನುವುದು ಕಾರಟಗಿಯ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಪರಿಷತ್ ಕಾರ್ಯದರ್ಶಿ ಭೀಮಣ್ಣ ಕರಡಿ, ಜಿಲ್ಲಾ ಮಹಿಳಾ ಪ್ರತಿನಿಧಿ ವಿಜಯಲಕ್ಷ್ಮಿ ಮೇಲಿನಮನಿ, ತಾಲೂಕಾ ಮಹಿಳಾ ಪ್ರತಿನಿಧಿ ಸುರೇಖಾ, ಸಂಘ ಸಂಸ್ಥೆ ಪ್ರತಿನಿಧಿ ಬಸವರಾಜ್ ಪಗಡ್ದಿನ್ನಿ, ಮಾಧ್ಯಮ ಪ್ರತಿನಿಧಿ ಶರಣು ಕೋಟ್ಯಾಳ, ಕಾರ್ಯಕಾರಿ ಮಂಡಳಿ ಸದಸ್ಯ ವಡಕ್ಕಣ್ಣನವರ್, ಅಕ್ಕ ಮಹಾದೇವಿ ಶ್ಯಾವಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು ಇವು…..!

ಬೆಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ಹೆಚ್ಚಾಗಿ ಸೇವಿಸಲು ಸಲಹೆ ನೀಡಿದೆ.

ಹಿಜಾಬ್ ಪ್ರಕರಣ: ಅರ್ಜಿದಾರರ ಅರ್ಜಿ ವಜಾ

ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು…

ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿ ಅಸ್ವಸ್ಥ

ಗ್ರಾಮ ಪಂಚಾಯತ್ ಚುನಾವಣೆಯ‌ ಮತ ಎಣಿಕೆ ಹಿನ್ನೆಲೆ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದ ಅಭ್ಯರ್ಥಿ ಅಸ್ವಸ್ಥಗೊಮಡ ಘಟನೆ ಹಾವೇರಿಯಲ್ಲಿ ನಡೆದಿದೆ.