ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ನ 7 ಸಾವಿರಕ್ಕೂ ಹೆಚ್ಚು ರೂಪಾಂತರಗಳು ಇರುವ ಸಾಧ್ಯತೆ ಇದ್ದು, ಈ ಪೈಕಿ ಕೆಲವು ಗಂಭೀರ ಅಪಾಯ ಉಂಟುಮಾಡಬಹುದು ಎಂದು ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ ಹೇಳಿದ್ದಾರೆ.

ರೂಪಾಂತರ ವೈರಸ್‌ಗಳ ಪೈಕಿ ‘ಎನ್440ಕೆ’ ದಕ್ಷಿಣದ ರಾಜ್ಯಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ ಎಂದು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ, ಕೋಶ ಹಾಗೂ ಅಣು ಜೀವಶಾಸ್ತ್ರ ಕೇಂದ್ರದ (ಸಿಸಿಎಂಬಿ) ನಿರ್ದೇಶಕರಾಗಿರುವ ರಾಕೇಶ್ ಮಿಶ್ರಾ ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್‌ನ ಸುಮಾರು 5 ಸಾವಿರ ರೂಪಾಂತರಗಳ ಬಗ್ಗೆ ಸಿಸಿಎಂಬಿ ಸಮಗ್ರ ವಿಶ್ಲೇಷಣೆ ನಡೆಸಿದೆ. ಸಾಂಕ್ರಾಮಿಕದ ಅವಧಿಯಲ್ಲಿ ಅವು ಹೇಗೆ ವಿಕಸನಗೊಂಡಿವೆ ಎಂಬುದನ್ನೂ ಅಧ್ಯಯನ ನಡೆಸಿದೆ.

ಹೈದರಾಬಾದ್ ಮೂಲದ ಸಿಸಿಎಂಬಿ ಸಂಸ್ಥೆಯು ವೈರಸ್‌ನ ವಿಕಸನ, ರೂಪಾಂತರ ಹಾಗೂ ತಳಿಗಳ ಬಗ್ಗೆ ಅಧ್ಯಯನ ನಡೆಸುತ್ತಿದೆ. ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಆರಂಭವಾದಾಗಿನಿAದಲೂ ಆ ಬಗ್ಗೆ ಸಂಸ್ಥೆಯು ಅಧ್ಯಯನ ನಡೆಸುತ್ತಿದೆ.

ಪ್ರತಿಯೊಂದು ರೂಪಾಂತರವೂ ಹೊಸ ತಳಿಯಾಗಿ ಪರಿವರ್ತನೆಯಾಗುವುದಿಲ್ಲ ಎಂದು ಮಿಶ್ರಾ ತಿಳಿಸಿದ್ದಾರೆ. ಸೋಂಕು ಹರಡುವಿಕೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.

ವೃದ್ಧರಿಗೆ ಬಿಸಿಯೂಟ ನೀಡಲು ಮುಂದಾದ ಕೇಂದ್ರ ಸರ್ಕಾರ

ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಸುಪ್ರೀಂಕೋರ್ಟ್ ಆದೇಶ: ಅನಂತ ಪದ್ಮನಾಭ ದೇವಸ್ಥಾನ ಆಡಳಿತ ರಾಜಮನೆತನದ ಹಕ್ಕು

ಈ ಐತಿಹಾಸಿಕ ದೇವಸ್ಥಾನದ ಆಡಳಿತದ ಮೇಲೆ ಹಿಡಿತ ಸಾಧಿಸಲು ಟ್ರಸ್ಟ್ ಒಂದನ್ನು ಸ್ಥಾಪಿಸುವಂತೆ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶ ರದ್ದು.

ರೈತರ ಬೆಂಬಲ ; ಫೆ.18 ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ

ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶಾದ್ಯಂತ ರೈಲು ತಡೆಗೆ ಕರೆ ನೀಡಿದ್ದು, ಈ ಕರೆಗೆ ಓಗೊಟ್ಟು ರಾಜ್ಯ ರೈತ ಸಂಘಟನೆಗಳು ರಾಜ್ಯದಾದ್ಯಂತ ರೈಲು ತಡೆ ಚಳವಳ ನಡೆಸಲಿದ್ದಾ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.